ಚಿತ್ರ ಮಂಜರಿ

ವೇಶ್ಯೆ ಜತೆ ರಿಲೇಷನ್‌ ಶಿಪ್: ಬ್ಲ್ಯಾಕ್‌ಮೇಲ್ ಆರೋಪ ಮಾಡಿ ಲೈವ್‌ನಲ್ಲೇ ವಿಷ ಸೇವಿಸಿದ ನಟ

ಮುಂಬೈ: ಜನಪ್ರಿಯ ಟಿವಿ ಶೋ ʼಕಪಿಲ್‌ ಶರ್ಮಾʼ ನಲ್ಲಿ ಸಹ ನಟನಾಗಿ ಕಾಣಿಸಿಕೊಂಡ ತೀರ್ಥಾನಂದ ರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಫೇಸ್‌ ಬುಕ್‌ ನಲ್ಲಿ ಲೈವ್‌ ಬಂದು ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ನೇಹಿತರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ ಕಾರಣ, ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

“ಕಳೆದ ಕೆಲ ಸಮಯದಿಂದ ನಾನು ರಿಲೇಷನ್‌ ಶಿಪ್‌ ನಲ್ಲಿದ್ದೆ. ಆ ಮಹಿಳೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನಾವಿಬ್ಬರು ಒಟ್ಟಿಗೆ ವಾಸಿಸುತ್ತಿದ್ದೆವು. ದಿನಗಳು ಹೋಗುತ್ತಿದ್ದಂತೆ, ಆಕೆ ವೇಶ್ಯೆಯ ಕೆಲಸವನ್ನು ಮಾಡುತ್ತಿದ್ದಾಳೆ ಎನ್ನುವುದು ನನಗೆ ಗೊತ್ತಾಯಿತು. ನಾನು ಅವಳನ್ನು ಇದರಿಂದ ಹೊರ ತರಲು ಯತ್ನಿಸಿದೆ. ಆದರೆ ಆಕೆ ಇದಕ್ಕೆ ವ್ಯತ್ತಿರಿಕ್ತವಾಗಿ ನನ್ನ ಮೇಲೆ ಕೇಸ್‌ ದಾಖಲಿಸಿದಳು. ಅವಳು ಹಾಗೆ ಯಾಕೆ ಮಾಡಿದಳು ಅಂಥ ಗೊತ್ತಿಲ್ಲ.

ಆ ಬಳಿಕ ನನಗೆ ಕರೆ ಮಾಡಿ ಭೇಟಿ ಆಗಬೇಕು ಎನ್ನುತ್ತಿದ್ದಳು. ನಾನು ಅವಳ ಮಾತಿಗೆ ಮತ್ತೆ ಮರುಳಾಗಿ ಎರಡು ದಿನ ನಾವಿಬ್ಬರೂ ಸುತ್ತಾಡಿ ಹೊಟೇಲ್‌ ನಲ್ಲಿ ಇದ್ದೆವು. ಆದರೆ ಅವಳು ಮತ್ತೆ ನನ್ನನು ಬ್ಲ್ಯಾಕ್‌ ಮೇಲ್‌ ಮಾಡಲು ಶುರು ಮಾಡಿದಳು. ನಿನ್ನ ಮೇಲೆ ಅತ್ಯಾಚಾರದ ಕೇಸ್‌ ದಾಖಲಿಸುತ್ತೇನೆ ಎಂದು ಬೆದರಿಸುತ್ತಿದ್ದಳು. ಅದೇ ಭೀತಿಯಿಂದ ನನ್ನ ಜೀವನದ ಮೇಲೆ ತುಂಬಾ ಪರಿಣಾಮ ಬೀರಿದೆ. ಹಲವು ದಿನಗಳಿಂದ ನನ್ನ ಮನೆಗೆ ಹೋಗಲಾಗದೆ ಫುಟ್‌ಪಾತ್‌ನಲ್ಲಿ ಮಲಗಿದ್ದೆ. ನನಗೆ 3-4 ಲಕ್ಷ ಸಾಲವಿದೆ. ಇದಕ್ಕೆ ಅವಳೇ ಕಾರಣ. ನಾನು ತುಂಬಾ ನೊಂದಿದ್ದೇನೆ. ಈ ಕಾರಣದಿಂದ ನಾನು ಸಾಯಲು ನಿರ್ಧರಿಸಿದ್ದೇನೆ” ನಟ ಲೈವ್‌ ನಲ್ಲಿ ಹೇಳಿದ್ದಾರೆ.

ನಾನು ನಿನ್ನ ಮೇಲೆ ಹಾಕಿದ ಪ್ರಕರಣವನ್ನು ವಾಪಾಸ್‌ ತೆಗೆದುಕೊಳ್ಳುತ್ತೇನೆ. ನೀನು ನನ್ನ ಜೊತೆ ಕೋರ್ಟ್‌ ಮ್ಯಾರೇಜ್‌ ಮಾಡಿಕ್ಕೋ ಎಂದಳು. ನಾನು ಎಮೋಷನಲ್‌  ವ್ಯಕ್ತಿ. ನಾನು ಜನರನ್ನು ಮನರಂಜನೆ ಮಾಡುತ್ತೇನೆ. ನನೊಬ್ಬ ಕಲಾವಿದ. ನನ್ನಿಂದ ಇದೆಲ್ಲ ಸಹಿಸಲು ಆಗಲ್ಲ. ನಾನು ಒಂದು ವೇಳೆ ಸತ್ತರೆ, ನನಗೆ ನ್ಯಾಯ ಸಿಗಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ವಿಡಿಯೋದಲ್ಲಿ ನಟ ಮಹಿಳೆಯ ಹೆಸರನ್ನು ಹೇಳಿದ್ದಾರೆ. ಈ ವಿಡಿಯೋವನ್ನು ನೋಡಿದ ನಟನ ಸ್ನೇಹಿತರು ಕೂಡಲೇ ಪಕ್ಕದ ಠಾಣೆಗೆ ಕರೆ ಮಾಡಿ ವಿಚಾರವನ್ನು ಹೇಳಿದ್ದಾರೆ.

ತೀರ್ಥಾನಂದ ರಾವ್ ಅವರ ಸ್ನೇಹಿತರ ಕರೆಯ ಬಳಿಕ ನಾವು ನೇರವಾಗಿ ಮೀರಾ ರಸ್ತೆಯ ಶಾಂತಿ ನಗರದಲ್ಲಿರುವ ಬಿ 51 ಕಟ್ಟಡದ 703 ನಂಬರ್‌ ನ ಕೋಣೆಗೆ ಹೋಗಿದ್ದೇವೆ. ಅಲ್ಲಿ ಮನೆಯ ಬಾಗಿಲು ತೆರೆದಿತ್ತು. ನಾವು ತೀರ್ಥಾನಂದ ಅವರನ್ನು ಕರೆದಿದ್ದೇವೆ. ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ಒಳಗೆ ಹೋಗಿ ನೋಡಿದ್ದೇವೆ. ಆಗ ನಟ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಪಕ್ಕದ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವರ್ಷವೂ ಸಾಲದ ವಿಚಾರವಾಗಿ ತೀರ್ಥಾನಂದ ರಾವ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.

2016 ರಲ್ಲಿ ಕಪಿಲ್‌ ಶರ್ಮಾ ಶೋನಲ್ಲಿ ಕಾಣಿಸಿಕೊಂಡ ತೀರ್ಥಾನಂದ ರಾವ್ ಬಳಿಕ ಗುಜರಾತ್‌ ನ ಸಿನಿಮಾಗಳಲ್ಲಿ ಬ್ಯುಸಿಯಾದರು.

andolanait

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

2 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

2 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

2 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

2 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

2 hours ago