ಚಿತ್ರ ಮಂಜರಿ

ವೇಶ್ಯೆ ಜತೆ ರಿಲೇಷನ್‌ ಶಿಪ್: ಬ್ಲ್ಯಾಕ್‌ಮೇಲ್ ಆರೋಪ ಮಾಡಿ ಲೈವ್‌ನಲ್ಲೇ ವಿಷ ಸೇವಿಸಿದ ನಟ

ಮುಂಬೈ: ಜನಪ್ರಿಯ ಟಿವಿ ಶೋ ʼಕಪಿಲ್‌ ಶರ್ಮಾʼ ನಲ್ಲಿ ಸಹ ನಟನಾಗಿ ಕಾಣಿಸಿಕೊಂಡ ತೀರ್ಥಾನಂದ ರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಫೇಸ್‌ ಬುಕ್‌ ನಲ್ಲಿ ಲೈವ್‌ ಬಂದು ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ನೇಹಿತರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ ಕಾರಣ, ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

“ಕಳೆದ ಕೆಲ ಸಮಯದಿಂದ ನಾನು ರಿಲೇಷನ್‌ ಶಿಪ್‌ ನಲ್ಲಿದ್ದೆ. ಆ ಮಹಿಳೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನಾವಿಬ್ಬರು ಒಟ್ಟಿಗೆ ವಾಸಿಸುತ್ತಿದ್ದೆವು. ದಿನಗಳು ಹೋಗುತ್ತಿದ್ದಂತೆ, ಆಕೆ ವೇಶ್ಯೆಯ ಕೆಲಸವನ್ನು ಮಾಡುತ್ತಿದ್ದಾಳೆ ಎನ್ನುವುದು ನನಗೆ ಗೊತ್ತಾಯಿತು. ನಾನು ಅವಳನ್ನು ಇದರಿಂದ ಹೊರ ತರಲು ಯತ್ನಿಸಿದೆ. ಆದರೆ ಆಕೆ ಇದಕ್ಕೆ ವ್ಯತ್ತಿರಿಕ್ತವಾಗಿ ನನ್ನ ಮೇಲೆ ಕೇಸ್‌ ದಾಖಲಿಸಿದಳು. ಅವಳು ಹಾಗೆ ಯಾಕೆ ಮಾಡಿದಳು ಅಂಥ ಗೊತ್ತಿಲ್ಲ.

ಆ ಬಳಿಕ ನನಗೆ ಕರೆ ಮಾಡಿ ಭೇಟಿ ಆಗಬೇಕು ಎನ್ನುತ್ತಿದ್ದಳು. ನಾನು ಅವಳ ಮಾತಿಗೆ ಮತ್ತೆ ಮರುಳಾಗಿ ಎರಡು ದಿನ ನಾವಿಬ್ಬರೂ ಸುತ್ತಾಡಿ ಹೊಟೇಲ್‌ ನಲ್ಲಿ ಇದ್ದೆವು. ಆದರೆ ಅವಳು ಮತ್ತೆ ನನ್ನನು ಬ್ಲ್ಯಾಕ್‌ ಮೇಲ್‌ ಮಾಡಲು ಶುರು ಮಾಡಿದಳು. ನಿನ್ನ ಮೇಲೆ ಅತ್ಯಾಚಾರದ ಕೇಸ್‌ ದಾಖಲಿಸುತ್ತೇನೆ ಎಂದು ಬೆದರಿಸುತ್ತಿದ್ದಳು. ಅದೇ ಭೀತಿಯಿಂದ ನನ್ನ ಜೀವನದ ಮೇಲೆ ತುಂಬಾ ಪರಿಣಾಮ ಬೀರಿದೆ. ಹಲವು ದಿನಗಳಿಂದ ನನ್ನ ಮನೆಗೆ ಹೋಗಲಾಗದೆ ಫುಟ್‌ಪಾತ್‌ನಲ್ಲಿ ಮಲಗಿದ್ದೆ. ನನಗೆ 3-4 ಲಕ್ಷ ಸಾಲವಿದೆ. ಇದಕ್ಕೆ ಅವಳೇ ಕಾರಣ. ನಾನು ತುಂಬಾ ನೊಂದಿದ್ದೇನೆ. ಈ ಕಾರಣದಿಂದ ನಾನು ಸಾಯಲು ನಿರ್ಧರಿಸಿದ್ದೇನೆ” ನಟ ಲೈವ್‌ ನಲ್ಲಿ ಹೇಳಿದ್ದಾರೆ.

ನಾನು ನಿನ್ನ ಮೇಲೆ ಹಾಕಿದ ಪ್ರಕರಣವನ್ನು ವಾಪಾಸ್‌ ತೆಗೆದುಕೊಳ್ಳುತ್ತೇನೆ. ನೀನು ನನ್ನ ಜೊತೆ ಕೋರ್ಟ್‌ ಮ್ಯಾರೇಜ್‌ ಮಾಡಿಕ್ಕೋ ಎಂದಳು. ನಾನು ಎಮೋಷನಲ್‌  ವ್ಯಕ್ತಿ. ನಾನು ಜನರನ್ನು ಮನರಂಜನೆ ಮಾಡುತ್ತೇನೆ. ನನೊಬ್ಬ ಕಲಾವಿದ. ನನ್ನಿಂದ ಇದೆಲ್ಲ ಸಹಿಸಲು ಆಗಲ್ಲ. ನಾನು ಒಂದು ವೇಳೆ ಸತ್ತರೆ, ನನಗೆ ನ್ಯಾಯ ಸಿಗಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ವಿಡಿಯೋದಲ್ಲಿ ನಟ ಮಹಿಳೆಯ ಹೆಸರನ್ನು ಹೇಳಿದ್ದಾರೆ. ಈ ವಿಡಿಯೋವನ್ನು ನೋಡಿದ ನಟನ ಸ್ನೇಹಿತರು ಕೂಡಲೇ ಪಕ್ಕದ ಠಾಣೆಗೆ ಕರೆ ಮಾಡಿ ವಿಚಾರವನ್ನು ಹೇಳಿದ್ದಾರೆ.

ತೀರ್ಥಾನಂದ ರಾವ್ ಅವರ ಸ್ನೇಹಿತರ ಕರೆಯ ಬಳಿಕ ನಾವು ನೇರವಾಗಿ ಮೀರಾ ರಸ್ತೆಯ ಶಾಂತಿ ನಗರದಲ್ಲಿರುವ ಬಿ 51 ಕಟ್ಟಡದ 703 ನಂಬರ್‌ ನ ಕೋಣೆಗೆ ಹೋಗಿದ್ದೇವೆ. ಅಲ್ಲಿ ಮನೆಯ ಬಾಗಿಲು ತೆರೆದಿತ್ತು. ನಾವು ತೀರ್ಥಾನಂದ ಅವರನ್ನು ಕರೆದಿದ್ದೇವೆ. ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ಒಳಗೆ ಹೋಗಿ ನೋಡಿದ್ದೇವೆ. ಆಗ ನಟ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರನ್ನು ಕೂಡಲೇ ಪಕ್ಕದ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವರ್ಷವೂ ಸಾಲದ ವಿಚಾರವಾಗಿ ತೀರ್ಥಾನಂದ ರಾವ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.

2016 ರಲ್ಲಿ ಕಪಿಲ್‌ ಶರ್ಮಾ ಶೋನಲ್ಲಿ ಕಾಣಿಸಿಕೊಂಡ ತೀರ್ಥಾನಂದ ರಾವ್ ಬಳಿಕ ಗುಜರಾತ್‌ ನ ಸಿನಿಮಾಗಳಲ್ಲಿ ಬ್ಯುಸಿಯಾದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

2 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

2 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

3 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

4 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

5 hours ago