ಚಿತ್ರ ಮಂಜರಿ

ಸಖತಾಗಿದೆ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ರಿಲೀಜ್

ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು.

ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.
ನಾನು “ಕೆಂಪೇಗೌಡ” ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.

ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು.
ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.

ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.
ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.

lokesh

Recent Posts

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

10 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

3 hours ago