ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು.
ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.
ನಾನು “ಕೆಂಪೇಗೌಡ” ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.
ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು.
ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.
ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.
ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…