ಚಿತ್ರ ಮಂಜರಿ

ಸಖತಾಗಿದೆ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ರಿಲೀಜ್

ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು.

ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.
ನಾನು “ಕೆಂಪೇಗೌಡ” ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.

ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ, ಚಿತ್ರಕ್ಕೆ ಶುಭ ಕೋರಿದರು.
ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.

ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.
ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.

lokesh

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

8 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

8 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

8 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

8 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

11 hours ago