ಚಿತ್ರ ಮಂಜರಿ

ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’ ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಗೌರವ ಸ್ವೀಕರಿಸಿದ ರಿಷಬ್​ಗೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ. ರಿಷಬ್ ಮಾತ್ರವಲ್ಲದೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ಈ ಮೊದಲು ಅನೇಕ ಕಾರ್ಯಕ್ರಮಗಳಿಗೆ ಅವರು ಇದೇ ರೀತಿ ಟ್ರೆಡಿಷನಲ್ ಲುಕ್​​ನಲ್ಲಿ ತೆರಳಿದ್ದರು. ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಿದರು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪ್ರಶಸ್ತಿಯನ್ನು ಅವರು ದೈವ ನರ್ತಕರು, ನಮ್ಮನ್ನು ಅಗಲಿದ ಪುನೀತ್ ರಾಜ್​ಕುಮಾರ್ ಹಾಗೂ ಎಸ್​​.ಕೆ ಭಗವಾನ್ ಅವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ.

ಅನುಪಮ್ ಖೇರ್ ಹಾಗೂ ವರುಣ್ ಧವನ್ ಅವರು ರೆಡ್ ಕಾರ್ಪೆಟ್​ ಮೇಲೆ ಮುಖಾಮುಖಿ ಆದರು. ಪರಸ್ಪರ ಅಪ್ಪಿಕೊಂಡು ವಿಶ್ ತಿಳಿಸಿದರು. ದುಲ್ಖರ್ ಸಲ್ಮಾನ್ ಕೂಡ ಎಲ್ಲರ ಗಮನ ಸೆಳೆದರು. ರೇಖಾ, ಆಲಿಯಾ ಭಟ್ ಸೇರಿ ಇನ್ನೂ ಅನೇಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆಲಿಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

 

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

1 hour ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

2 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

2 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

2 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

2 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

2 hours ago