ಚಿತ್ರ ಮಂಜರಿ

ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’ ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಗೌರವ ಸ್ವೀಕರಿಸಿದ ರಿಷಬ್​ಗೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ. ರಿಷಬ್ ಮಾತ್ರವಲ್ಲದೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ಈ ಮೊದಲು ಅನೇಕ ಕಾರ್ಯಕ್ರಮಗಳಿಗೆ ಅವರು ಇದೇ ರೀತಿ ಟ್ರೆಡಿಷನಲ್ ಲುಕ್​​ನಲ್ಲಿ ತೆರಳಿದ್ದರು. ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಿದರು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪ್ರಶಸ್ತಿಯನ್ನು ಅವರು ದೈವ ನರ್ತಕರು, ನಮ್ಮನ್ನು ಅಗಲಿದ ಪುನೀತ್ ರಾಜ್​ಕುಮಾರ್ ಹಾಗೂ ಎಸ್​​.ಕೆ ಭಗವಾನ್ ಅವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ.

ಅನುಪಮ್ ಖೇರ್ ಹಾಗೂ ವರುಣ್ ಧವನ್ ಅವರು ರೆಡ್ ಕಾರ್ಪೆಟ್​ ಮೇಲೆ ಮುಖಾಮುಖಿ ಆದರು. ಪರಸ್ಪರ ಅಪ್ಪಿಕೊಂಡು ವಿಶ್ ತಿಳಿಸಿದರು. ದುಲ್ಖರ್ ಸಲ್ಮಾನ್ ಕೂಡ ಎಲ್ಲರ ಗಮನ ಸೆಳೆದರು. ರೇಖಾ, ಆಲಿಯಾ ಭಟ್ ಸೇರಿ ಇನ್ನೂ ಅನೇಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆಲಿಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago