ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಗಡಿಗೂ ಮೀರಿ ಅಬ್ಬರಿಸುತ್ತಿದೆ. ಭಾರಿ ಬೇಡಿಕೆಯ ಮೇರೆಗೆ ಕಾಂತಾರ ಪರಭಾಷೆಗಳಲ್ಲಿ ರಿಲೀಸ್ ಆಗಿದೆ. ಇದೀಗ ಕಾಂತಾರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಹಿಂದಿಯಲ್ಲಿ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ವಿಶೇಷ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡುತ್ತಿದೆ. ಅಂದಹಾಗೆ ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಸೆಲೆಬ್ರಿಟಿಗಳು ಸಹ ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
ತೆಲುಗು ಸ್ಟಾರ್ ಪ್ರಭಾಸ್, ನಾನಿ, ರಾಣಾ ದಗ್ಗುಬಾಟಿ, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಧನುಷ್, ಕಾರ್ತಿ ಸೇರಿದಂತೆ ಅನೇಕ ಸ್ಟಾರ್ಸ್ ಕಾಂತಾರ ನೋಡಿ ಹಾಡಿಹೊಗಳಿದ್ದಾರೆ. ವಿಶೇಷ ಎಂದರೆ ತೆಲುಗು ಸ್ಟಾರ್ ಪ್ರಭಾಸ್ ಎರಡು ಬಾರಿ ಕಾಂತಾರ ಸಿನಿಮಾ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ಇದೀಗ ಬಾಲಿವುಡ್ ನಟಿ ಹಾಗೂ ಕನ್ನಡತಿ ಶಿಲ್ಪಾ ಶೆಟ್ಟಿ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ ಎಂಥ ಅದ್ಭುತವಾದ ಸಿನಿಮಾ ಎಂದು ಹೇಳಿದ್ದಾರೆ. ಸಿನಿಮಾ ನೋಡಿ ರೊಮಾಂಚನ ವಯಿತು ಎಂದು ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದಾರೆ. ‘ಕಾಂತಾರ ಚಿತ್ರಕ್ಕೆ ಮೆಚ್ಚುಗೆಯ ಪೋಸ್ಟ್. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದೆ. ಓ ಮೈ ಗಾಡ್ ಎಂಥ ಸಿನಿಮಾ. ಅದ್ಭುತವಾದ ನರೇಟಿವ್, ವೈಬ್ ಮತ್ತು ಪ್ರಪಂಚ. ಕ್ಲೈಮ್ಯಾಕ್ಸ್ ನೋಡಿ ಗೂಸ್ಬಂಪ್ಸ್ ಬಂತು. ನಾನು ಸೇರಿದಂತೆ ವೀಕ್ಷಕನನ್ನು ಆ ಜಗತ್ತಿಗೆ ಕರೆದುಕೊಂಡು ಹೋಗುತ್ತೆ. ನಿಜವಾಗಿಯೂ ನನ್ನನ್ನು ನನ್ನ ಊರಿಗೆ ಕರೆದೊಯ್ತು ಇದು ಸಿನಿಮಾ ಶಕ್ತಿ. ಯಾವುದೇ ಪಕ್ಷಪಾತವಿಲ್ಲದೆ, ಕಥೆ ಹೇಳುವಿಕೆ, ಅಭಿನಯ, ನಂಬಿಕೆ ಮತ್ತು ಅದ್ಭುತ ನಿರ್ದೇಶನ. ನೋಡಲೇ ಬೇಕಾದ ಸಿನಿಮಾ. ರಿಷಬ್ ಶೆಟ್ಟಿ ನಿಮ್ಮ ಬಹುಮುಖ ಪ್ರತಿಭೆಗೆ ಹ್ಯಾಟ್ಸ್ ಆಫ್. ಸಕ್ಸಸ್ ಎಂಜಾಯ್ ಮಾಡಿ’ ಎಂದು ಹೇಳಿದ್ದಾರೆ.
ಕರ್ನಾಟಕ ಕರಾವಳಿ ಮೂಲದ ಶಿಲ್ಪಾ ಶೆಟ್ಟಿ ಬಾಲಿವುಡ್ನಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಶಿಲ್ಪಾ ಶೆಟ್ಟಿ ಬಳಿಕ ಬಾಲಿವುಡ್ಗೆ ಹಾರಿದರು. ಅಲ್ಲೇ ಖ್ಯಾತಿ ಗಳಿಸಿದ ಶಿಲ್ಪಾ ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ. ಆದರೂ ತನ್ನ ಊರಿನ ಆಚಾರ, ವಿಚಾರಗಳ ಬಗ್ಗೆ ಇರುವ ಸಿನಿಮಾ ನೋಡಿ ಹೊಗಳಿರುವುದು ವಿಶೇಷ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…