ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಗಡಿಗೂ ಮೀರಿ ಅಬ್ಬರಿಸುತ್ತಿದೆ. ಭಾರಿ ಬೇಡಿಕೆಯ ಮೇರೆಗೆ ಕಾಂತಾರ ಪರಭಾಷೆಗಳಲ್ಲಿ ರಿಲೀಸ್ ಆಗಿದೆ. ಇದೀಗ ಕಾಂತಾರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಹಿಂದಿಯಲ್ಲಿ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ವಿಶೇಷ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡುತ್ತಿದೆ. ಅಂದಹಾಗೆ ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಸೆಲೆಬ್ರಿಟಿಗಳು ಸಹ ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
ತೆಲುಗು ಸ್ಟಾರ್ ಪ್ರಭಾಸ್, ನಾನಿ, ರಾಣಾ ದಗ್ಗುಬಾಟಿ, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಧನುಷ್, ಕಾರ್ತಿ ಸೇರಿದಂತೆ ಅನೇಕ ಸ್ಟಾರ್ಸ್ ಕಾಂತಾರ ನೋಡಿ ಹಾಡಿಹೊಗಳಿದ್ದಾರೆ. ವಿಶೇಷ ಎಂದರೆ ತೆಲುಗು ಸ್ಟಾರ್ ಪ್ರಭಾಸ್ ಎರಡು ಬಾರಿ ಕಾಂತಾರ ಸಿನಿಮಾ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಕನ್ನಡ ಮೂಲದ ತೆಲುಗು ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ಇದೀಗ ಬಾಲಿವುಡ್ ನಟಿ ಹಾಗೂ ಕನ್ನಡತಿ ಶಿಲ್ಪಾ ಶೆಟ್ಟಿ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ ಎಂಥ ಅದ್ಭುತವಾದ ಸಿನಿಮಾ ಎಂದು ಹೇಳಿದ್ದಾರೆ. ಸಿನಿಮಾ ನೋಡಿ ರೊಮಾಂಚನ ವಯಿತು ಎಂದು ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದಾರೆ. ‘ಕಾಂತಾರ ಚಿತ್ರಕ್ಕೆ ಮೆಚ್ಚುಗೆಯ ಪೋಸ್ಟ್. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದೆ. ಓ ಮೈ ಗಾಡ್ ಎಂಥ ಸಿನಿಮಾ. ಅದ್ಭುತವಾದ ನರೇಟಿವ್, ವೈಬ್ ಮತ್ತು ಪ್ರಪಂಚ. ಕ್ಲೈಮ್ಯಾಕ್ಸ್ ನೋಡಿ ಗೂಸ್ಬಂಪ್ಸ್ ಬಂತು. ನಾನು ಸೇರಿದಂತೆ ವೀಕ್ಷಕನನ್ನು ಆ ಜಗತ್ತಿಗೆ ಕರೆದುಕೊಂಡು ಹೋಗುತ್ತೆ. ನಿಜವಾಗಿಯೂ ನನ್ನನ್ನು ನನ್ನ ಊರಿಗೆ ಕರೆದೊಯ್ತು ಇದು ಸಿನಿಮಾ ಶಕ್ತಿ. ಯಾವುದೇ ಪಕ್ಷಪಾತವಿಲ್ಲದೆ, ಕಥೆ ಹೇಳುವಿಕೆ, ಅಭಿನಯ, ನಂಬಿಕೆ ಮತ್ತು ಅದ್ಭುತ ನಿರ್ದೇಶನ. ನೋಡಲೇ ಬೇಕಾದ ಸಿನಿಮಾ. ರಿಷಬ್ ಶೆಟ್ಟಿ ನಿಮ್ಮ ಬಹುಮುಖ ಪ್ರತಿಭೆಗೆ ಹ್ಯಾಟ್ಸ್ ಆಫ್. ಸಕ್ಸಸ್ ಎಂಜಾಯ್ ಮಾಡಿ’ ಎಂದು ಹೇಳಿದ್ದಾರೆ.
ಕರ್ನಾಟಕ ಕರಾವಳಿ ಮೂಲದ ಶಿಲ್ಪಾ ಶೆಟ್ಟಿ ಬಾಲಿವುಡ್ನಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಶಿಲ್ಪಾ ಶೆಟ್ಟಿ ಬಳಿಕ ಬಾಲಿವುಡ್ಗೆ ಹಾರಿದರು. ಅಲ್ಲೇ ಖ್ಯಾತಿ ಗಳಿಸಿದ ಶಿಲ್ಪಾ ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ. ಆದರೂ ತನ್ನ ಊರಿನ ಆಚಾರ, ವಿಚಾರಗಳ ಬಗ್ಗೆ ಇರುವ ಸಿನಿಮಾ ನೋಡಿ ಹೊಗಳಿರುವುದು ವಿಶೇಷ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…