ಚಿತ್ರ ಮಂಜರಿ

ರಿಷಬ್​ ಶೆಟ್ಟಿ ನಿರ್ಮಾಣದ SHIVAMMA ಚಿತ್ರಕ್ಕೆ ಯಂಗ್‌ ಜ್ಯೂರಿ ಆವಾರ್ಡ್‌

ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಪಡೆದುಕೊಂಡಿದೆ.

ಕಾಂತಾರ ಮೂಲಕ ಕಳೆದ ಸುಮಾರು 60 ದಿನಗಳಿಂದ ಸುದ್ದಿಯಲ್ಲಿರುವ ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಬೂಸಾನ್ ಚಿತ್ರೋತ್ಸವದ ಪ್ರತಿಷ್ಠಿತ ‘ನ್ಯೂ ಕರೆಂಟ್ಸ್’ ಪ್ರಶಸ್ತಿ ಪಡೆದು ಖ್ಯಾತಿ ಗಳಿಸಿತ್ತು. ಇದೀಗ ಇದೇ ಚಿತ್ರ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆಯುವ ಮೂಲಕ ಸುದ್ದಿಯಾಗಿದೆ.
ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44 ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಶಿವಮ್ಮ ಚಿತ್ರ ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ನಿರ್ಮಾಪಕ ರಿಷಬ್‌ ಶೆಟ್ಟಿ ಅವರೇ ಹಂಚಿಕೊಂಡಿದ್ದಾರೆ.

ಈ ಸಿನಿಮಾವನ್ನು ಜೈಶಂಕರ್‌ ಆರ್ಯರ್‌ ನಿರ್ದೇಶಿಸಿದ್ದು, ಶರಣಮ್ಮ ಚೆಟ್ಟಿ ಹಾಗೂ ಚೆನ್ನಮ್ಮ ಅಬ್ಬೆಗೆರೆ ಅಭಿನಯಿಸಿದ್ದಾರೆ. ಮಧ್ಯಮ ವಯಸ್ಸಿನ ಬಡ ಹೆಣ್ಣು ಮಗಳೊಬ್ಬಳು ಪಾನೀಯದ ಕಂಪನಿಗೆ ಮಾರಾಟ ಪ್ರತಿನಿಧಿಯಾಗಿ ಹೋದಾಗ ಅನುಭವಿಸುವ ಸಾಕಷ್ಟು ಅನುಭವಗಳ ಕಥೆ ಈ ಸಿನಿಮಾದಲ್ಲಿದೆ.

andolanait

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

10 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

10 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

10 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

11 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

12 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

12 hours ago