ಚಿತ್ರ ಮಂಜರಿ

ರಿಷಬ್​ ಶೆಟ್ಟಿ ನಿರ್ಮಾಣದ SHIVAMMA ಚಿತ್ರಕ್ಕೆ ಯಂಗ್‌ ಜ್ಯೂರಿ ಆವಾರ್ಡ್‌

ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಪಡೆದುಕೊಂಡಿದೆ.

ಕಾಂತಾರ ಮೂಲಕ ಕಳೆದ ಸುಮಾರು 60 ದಿನಗಳಿಂದ ಸುದ್ದಿಯಲ್ಲಿರುವ ನಟ ರಿಷಬ್​ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಬೂಸಾನ್ ಚಿತ್ರೋತ್ಸವದ ಪ್ರತಿಷ್ಠಿತ ‘ನ್ಯೂ ಕರೆಂಟ್ಸ್’ ಪ್ರಶಸ್ತಿ ಪಡೆದು ಖ್ಯಾತಿ ಗಳಿಸಿತ್ತು. ಇದೀಗ ಇದೇ ಚಿತ್ರ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆಯುವ ಮೂಲಕ ಸುದ್ದಿಯಾಗಿದೆ.
ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್‌ ಎಫ್​3 ಕಾಂಟಿನೆಂಟ್ಸ್​ನ 44 ನೇ ಆವೃತ್ತಿಯಲ್ಲಿ ‘ಯಂಗ್‌ ಜ್ಯೂರಿ ಆವಾರ್ಡ್‌’ ಅನ್ನು ಶಿವಮ್ಮ ಚಿತ್ರ ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ನಿರ್ಮಾಪಕ ರಿಷಬ್‌ ಶೆಟ್ಟಿ ಅವರೇ ಹಂಚಿಕೊಂಡಿದ್ದಾರೆ.

ಈ ಸಿನಿಮಾವನ್ನು ಜೈಶಂಕರ್‌ ಆರ್ಯರ್‌ ನಿರ್ದೇಶಿಸಿದ್ದು, ಶರಣಮ್ಮ ಚೆಟ್ಟಿ ಹಾಗೂ ಚೆನ್ನಮ್ಮ ಅಬ್ಬೆಗೆರೆ ಅಭಿನಯಿಸಿದ್ದಾರೆ. ಮಧ್ಯಮ ವಯಸ್ಸಿನ ಬಡ ಹೆಣ್ಣು ಮಗಳೊಬ್ಬಳು ಪಾನೀಯದ ಕಂಪನಿಗೆ ಮಾರಾಟ ಪ್ರತಿನಿಧಿಯಾಗಿ ಹೋದಾಗ ಅನುಭವಿಸುವ ಸಾಕಷ್ಟು ಅನುಭವಗಳ ಕಥೆ ಈ ಸಿನಿಮಾದಲ್ಲಿದೆ.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

7 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

7 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

7 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

7 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

7 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

7 hours ago