ಚಿತ್ರ ಮಂಜರಿ

ರಾಕಿಂಗ್‌ ಕಿಡ್‌ ಐರಾ ಬರ್ತ್‌ಡೇ ಸಂಭ್ರಮ

ಸ್ಯಾಂಡಲ್ವುಡ್‌ ನ ರಾಕಿಂಗ್‌ ಕಪಲ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಪುತ್ರಿ ಐರಾ ತಮ್ಮ ಐದನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಡಿಸೆಂಬರ್‌ 2 ರಂದು ರಾಕಿಂಗ್‌ ಕಿಡ್‌ ಐರಾ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್‌ ನಲ್ಲಿ ಐರಾಸ್‌ ವಿಂಟರ್‌ ಲ್ಯಾಂಡ್‌ ಥೀಮ್‌ ನಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ.

ಬರ್ತ್‌ ಡೇ ಪಾರ್ಟಿ ವಿಡಿಯೋವನ್ನು ತಡವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ರಾಧಿಕಾ ಪಂಡಿತ್‌ ಅವರು 2.12.2018 ನನ್ನ ಏಂಜಲ್‌ ನಮ್ಮ ಜೀವನಕ್ಕೆ ಬಂದ ವಿಶೇಷ ದಿನ ಇದು. ಸಂತೋಷವನ್ನು ತಂದುಕೊಟ್ಟ ಮುದ್ದುಗಳಿಗೆ 5 ವರ್ಷವಾಗಿದೆ ಅಂದ್ರೆ ನಂಬಲು ಆಗುತ್ತಿಲ್ಲ. ಲವ್‌ ಯೂ ಮೈ ಲಿಟಲ್‌ ಗರ್ಲ್‌ ಎಂದು ಬರೆದಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಕಿಂಗ್‌ ಕಿಡ್‌ ಐರಾ ಪ್ರಿನ್ಸೆಸ್‌ ನಂತೆ ಗೌನ್‌ ಧರಿಸಿ ಕ್ರೌನ್‌ ತೊಟ್ಟು ಮಿಂಚಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ಅದೇಷ್ಟೇ ಬ್ಯುಸಿ ಇದ್ರೂ ಕೂಡ ಫ್ಯಾಮಿಲಿ ವಿಚಾರದಲ್ಲಿ ರಾಜಿ ಆಗೋ ಮಾತೇ ಇಲ್ಲ. ಈ ಮೂಲಕ ಯಶ್‌ ಅವರು ಪಕ್ಕ ಫ್ಯಾಮಿಲಿ ಮ್ಯಾನ್‌ ಮ್ಯಾನ್‌ ಅನ್ನೋದನ್ನ ಪ್ರೂವ್‌ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಟಾಕ್ಸಿಕ್‌ ನ ಬ್ಯುಸಿ ಶೆಡ್ಯೂಲ್‌ ನಡುವೆಯೂ ಯಶ್‌ ಅವರು ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಯಶ್ ದಂಪತಿ ಮಗಳು ಐರಾ ಹಾಗೂ ಮಗ ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಕೂಡ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಗಳ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್‌ ಒಂದರಲ್ಲಿ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ.

ಬರ್ತ್‌ ಡೇ ಪಾರ್ಟಿಯನ್ನು ಕೆಲ ಆಪ್ತರು ಹಾಗೂ ಕುಟುಂಬಸ್ಥರೊಂದಿಗೆ ಆಚರಣೆ ಮಾಡಲಾಗಿದೆ.

lokesh

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

8 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

41 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago