ಚಿತ್ರ ಮಂಜರಿ

ರಾಕಿಂಗ್‌ ಕಿಡ್‌ ಐರಾ ಬರ್ತ್‌ಡೇ ಸಂಭ್ರಮ

ಸ್ಯಾಂಡಲ್ವುಡ್‌ ನ ರಾಕಿಂಗ್‌ ಕಪಲ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಪುತ್ರಿ ಐರಾ ತಮ್ಮ ಐದನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಡಿಸೆಂಬರ್‌ 2 ರಂದು ರಾಕಿಂಗ್‌ ಕಿಡ್‌ ಐರಾ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್‌ ನಲ್ಲಿ ಐರಾಸ್‌ ವಿಂಟರ್‌ ಲ್ಯಾಂಡ್‌ ಥೀಮ್‌ ನಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ.

ಬರ್ತ್‌ ಡೇ ಪಾರ್ಟಿ ವಿಡಿಯೋವನ್ನು ತಡವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ರಾಧಿಕಾ ಪಂಡಿತ್‌ ಅವರು 2.12.2018 ನನ್ನ ಏಂಜಲ್‌ ನಮ್ಮ ಜೀವನಕ್ಕೆ ಬಂದ ವಿಶೇಷ ದಿನ ಇದು. ಸಂತೋಷವನ್ನು ತಂದುಕೊಟ್ಟ ಮುದ್ದುಗಳಿಗೆ 5 ವರ್ಷವಾಗಿದೆ ಅಂದ್ರೆ ನಂಬಲು ಆಗುತ್ತಿಲ್ಲ. ಲವ್‌ ಯೂ ಮೈ ಲಿಟಲ್‌ ಗರ್ಲ್‌ ಎಂದು ಬರೆದಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಯಲ್ಲಿ ರಾಕಿಂಗ್‌ ಕಿಡ್‌ ಐರಾ ಪ್ರಿನ್ಸೆಸ್‌ ನಂತೆ ಗೌನ್‌ ಧರಿಸಿ ಕ್ರೌನ್‌ ತೊಟ್ಟು ಮಿಂಚಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ಅದೇಷ್ಟೇ ಬ್ಯುಸಿ ಇದ್ರೂ ಕೂಡ ಫ್ಯಾಮಿಲಿ ವಿಚಾರದಲ್ಲಿ ರಾಜಿ ಆಗೋ ಮಾತೇ ಇಲ್ಲ. ಈ ಮೂಲಕ ಯಶ್‌ ಅವರು ಪಕ್ಕ ಫ್ಯಾಮಿಲಿ ಮ್ಯಾನ್‌ ಮ್ಯಾನ್‌ ಅನ್ನೋದನ್ನ ಪ್ರೂವ್‌ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಟಾಕ್ಸಿಕ್‌ ನ ಬ್ಯುಸಿ ಶೆಡ್ಯೂಲ್‌ ನಡುವೆಯೂ ಯಶ್‌ ಅವರು ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಯಶ್ ದಂಪತಿ ಮಗಳು ಐರಾ ಹಾಗೂ ಮಗ ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಕೂಡ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಗಳ ಹುಟ್ಟುಹಬ್ಬವನ್ನು ಬೆಂಗಳೂರಿನ ಖಾಸಗಿ ರೆಸಾರ್ಟ್‌ ಒಂದರಲ್ಲಿ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ.

ಬರ್ತ್‌ ಡೇ ಪಾರ್ಟಿಯನ್ನು ಕೆಲ ಆಪ್ತರು ಹಾಗೂ ಕುಟುಂಬಸ್ಥರೊಂದಿಗೆ ಆಚರಣೆ ಮಾಡಲಾಗಿದೆ.

lokesh

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

6 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

6 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

6 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

6 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

6 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

6 hours ago