ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್ಗೆ ಎಂಟ್ರಿ ಕೊಟ್ಟಿದ್ದರು.
ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ ನಟರಾದ ದರ್ಶನ್ ಹಾಗೂ ಯಶ್ ಅವರು ಕಳೆದ ಚುನಾವಣೆಯಲ್ಲಿ ಸುಮಲತಾ ಪರ ಭರ್ಜರಿ ಕ್ಯಾಂಪೆನ್ ಮಾಡಿದ್ದು, ಸುಮಲತಾ ಅವರ ಗೆಲುವಲ್ಲಿ ಜೋಡೆತ್ತುಗಳು ಮುಖ್ಯ ಪಾತ್ರ ವಹಿಸಿದ್ದರು.
ಆದರೆ ಈ ಬಾರಿಯ ಲೋಕ ಚುನಾವಣೆಯಲ್ಲಿ ಪ್ರಚಾರಕ್ಕೆ ನಟ ದರ್ಶನ್ ಭಾಗವಹಿಸುವುದಾಗಿ ಹೇಳಿದರೆ, ಇತ್ತ ಯಶ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಲ್ಲಾ ವಿಚಾರಗಳ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರು ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಈಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಮೊದಲೇ ನನ್ನ ಜೊತೆ ಚರ್ಚೆ ಮಾಡಿದ್ದರು. 2018 ರ ಚುನಾವಣೆ ವೇಳೆ ಎಚ್ಡಿಕೆ ಅವರು ಸೇರಿದಂತೆ ಹಲವಾರು ರಾಜಕೀಯ ನಾಯಕರಿಂದ ಅಹಿತಕರ ಮಾತುಗಳನ್ನು ಕೇಳಬೇಕಾಯಿತು. ಇದು ನನ್ನ ಮನಸ್ಸಿಗೆ ನೋವುಂಟು ಮಾಡಿತ್ತು ಎಂದು ಯಶ್ ಹೇಳಿಕೊಂಡಿದ್ದಾರೆ.
ಈಗ ಅವರೊಬ್ಬ ಪ್ಯಾನ್ ಇಂಡಿಯಾ ಸ್ಟಾರ್, ಬ್ಯುಸಿ ಶೆಡುಲ್ಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆಯಲು ಮನಸ್ಸಾಗುತ್ತಿಲ್ಲ ಎಂದು ಸಂಸದೆ ಹೇಳಿದ್ದಾರೆ.
ಕಳೆದ ಬಾರಿಯ ಚುನಾವಣಾ ಪ್ರಚಾರದ ವೇಳೆ ಅಂಬರೀಶ್ ಅವರ ಮೇಲಿನ ಅಭಿಮಾನದಿಂದ ಪ್ರಚಾರದಲ್ಲಿ ಭಾಗಿಯಾಗಿದ್ದರು, ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಈ ಸಲ ಯಶ್ ಚುನಾವಣಾ ಪ್ರಚಾರಕ್ಕೆ ಬರುವುದಾದರೇ ನನಗಿಂತ ಖುಷಿ ಪಡುವ ವ್ಯಕ್ತಿ ಇನ್ನೊಬ್ಬರಿಲ್ಲ. ಬರಲಿಲ್ಲ ಎಂದರೆ ಯಾವುದೇ ಬೇಸರವೂ ಇಲ್ಲ ಎನ್ನುವ ಮೂಲಕ ಎಲ್ಲಾ ಉಹಾಪೋಹಗಳಿಗೆ ಸಂಸದೆ ಸುಮಲತಾ ಅಂಬರೀಶ್ ತೆರೆ ಎಳೆದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…