ಚಿತ್ರ ಮಂಜರಿ

ಚುನಾವಣಾ ಪ್ರಚಾರಕ್ಕೆ ಯಶ್‌ ಗೈರು: ಸ್ಪಷ್ಟನೆ ನೀಡಿದ ಸಂಸದೆ ಸುಮಲತಾ

ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು.

ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ ನಟರಾದ ದರ್ಶನ್‌ ಹಾಗೂ ಯಶ್‌ ಅವರು ಕಳೆದ ಚುನಾವಣೆಯಲ್ಲಿ ಸುಮಲತಾ ಪರ ಭರ್ಜರಿ ಕ್ಯಾಂಪೆನ್‌ ಮಾಡಿದ್ದು, ಸುಮಲತಾ ಅವರ ಗೆಲುವಲ್ಲಿ ಜೋಡೆತ್ತುಗಳು ಮುಖ್ಯ ಪಾತ್ರ ವಹಿಸಿದ್ದರು.

ಆದರೆ ಈ ಬಾರಿಯ ಲೋಕ ಚುನಾವಣೆಯಲ್ಲಿ ಪ್ರಚಾರಕ್ಕೆ ನಟ ದರ್ಶನ್‌ ಭಾಗವಹಿಸುವುದಾಗಿ ಹೇಳಿದರೆ, ಇತ್ತ ಯಶ್‌ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಲ್ಲಾ ವಿಚಾರಗಳ ಬಗ್ಗೆ ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟನೆ ನೀಡಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ಅವರು ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಈಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಮೊದಲೇ ನನ್ನ ಜೊತೆ ಚರ್ಚೆ ಮಾಡಿದ್ದರು. 2018 ರ ಚುನಾವಣೆ ವೇಳೆ ಎಚ್‌ಡಿಕೆ ಅವರು ಸೇರಿದಂತೆ ಹಲವಾರು ರಾಜಕೀಯ ನಾಯಕರಿಂದ ಅಹಿತಕರ ಮಾತುಗಳನ್ನು ಕೇಳಬೇಕಾಯಿತು. ಇದು ನನ್ನ ಮನಸ್ಸಿಗೆ ನೋವುಂಟು ಮಾಡಿತ್ತು ಎಂದು ಯಶ್‌ ಹೇಳಿಕೊಂಡಿದ್ದಾರೆ.

ಈಗ ಅವರೊಬ್ಬ ಪ್ಯಾನ್‌ ಇಂಡಿಯಾ ಸ್ಟಾರ್‌, ಬ್ಯುಸಿ ಶೆಡುಲ್ಡ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆಯಲು ಮನಸ್ಸಾಗುತ್ತಿಲ್ಲ ಎಂದು ಸಂಸದೆ ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದ ವೇಳೆ ಅಂಬರೀಶ್‌ ಅವರ ಮೇಲಿನ ಅಭಿಮಾನದಿಂದ ಪ್ರಚಾರದಲ್ಲಿ ಭಾಗಿಯಾಗಿದ್ದರು, ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಈ ಸಲ ಯಶ್‌ ಚುನಾವಣಾ ಪ್ರಚಾರಕ್ಕೆ ಬರುವುದಾದರೇ ನನಗಿಂತ ಖುಷಿ ಪಡುವ ವ್ಯಕ್ತಿ ಇನ್ನೊಬ್ಬರಿಲ್ಲ. ಬರಲಿಲ್ಲ ಎಂದರೆ ಯಾವುದೇ ಬೇಸರವೂ ಇಲ್ಲ ಎನ್ನುವ ಮೂಲಕ ಎಲ್ಲಾ ಉಹಾಪೋಹಗಳಿಗೆ ಸಂಸದೆ ಸುಮಲತಾ ಅಂಬರೀಶ್‌ ತೆರೆ ಎಳೆದಿದ್ದಾರೆ.

andolana

Recent Posts

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

49 mins ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

7 hours ago