ಚಿತ್ರ ಮಂಜರಿ

ಹೊಂಬಾಳೆ ಫಿಲ್ಮ್ಸ್‌ ಬಗ್ಗೆ ರಾಕಿ ಬಾಯ್‌ ಮೆಚ್ಚುಗೆ

ಹೊಂಬಾಳೆ ಫಿಲ್ಮ್ಸ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್‌ ಗೆ ಸ್ವತಃ ಯಶ್‌ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ.
ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್‌ ಮತ್ತು ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ತಮ್ಮ ನಡುವಿನ ಬಾಂದವ್ಯಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.
ಯಶ್‌ ಅವರ ಟಾಕ್ಸಿಕ್‌ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಶುಭಕೋರಿದೆ. ಅಂತೆಯೇ ರಾಕಿಮಗ್‌ ಸ್ಟಾರ್‌ ಯಶ್‌ ಅವರೂ ಕೂಡ ಕಾಂತಾರ ಚಾಪ್ಟರ್‌ 1 ಹಾಗೂ ಸಲಾರ್‌ ಸಿನಿಮಾಗೆ ಅಭಿನಂದನೆ ತಿಳಿಸಿದ್ದು, ಎರಡೂ ಸಿನಿಮಾಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಸುಳ್ಳುಸುದ್ದಿಗಳಿಗೆ ತೆರೆ ಎಳೆದಿದ್ದಾರೆ.
ಯಶ್‌ ಮುಂದಿನ ಸಿನಿಮಾ ಯಾವುದು ಅಂತಾ ಕಾಯುತ್ತಿದ್ದ ಅಭಿಮಾನಿಗಳ ಕಾತರಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬ ಅಭಿಮಾನಿಗಳ ಕುತೂಹಲಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರ ʼಟಾಕ್ಸಿಕ್‌ʼ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು.
ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ.
lokesh

Recent Posts

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

4 mins ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

16 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

36 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

53 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

59 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

1 hour ago