ಚಿತ್ರ ಮಂಜರಿ

ಹೊಂಬಾಳೆ ಫಿಲ್ಮ್ಸ್‌ ಬಗ್ಗೆ ರಾಕಿ ಬಾಯ್‌ ಮೆಚ್ಚುಗೆ

ಹೊಂಬಾಳೆ ಫಿಲ್ಮ್ಸ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್‌ ಗೆ ಸ್ವತಃ ಯಶ್‌ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ.
ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್‌ ಮತ್ತು ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ತಮ್ಮ ನಡುವಿನ ಬಾಂದವ್ಯಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.
ಯಶ್‌ ಅವರ ಟಾಕ್ಸಿಕ್‌ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಶುಭಕೋರಿದೆ. ಅಂತೆಯೇ ರಾಕಿಮಗ್‌ ಸ್ಟಾರ್‌ ಯಶ್‌ ಅವರೂ ಕೂಡ ಕಾಂತಾರ ಚಾಪ್ಟರ್‌ 1 ಹಾಗೂ ಸಲಾರ್‌ ಸಿನಿಮಾಗೆ ಅಭಿನಂದನೆ ತಿಳಿಸಿದ್ದು, ಎರಡೂ ಸಿನಿಮಾಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಸುಳ್ಳುಸುದ್ದಿಗಳಿಗೆ ತೆರೆ ಎಳೆದಿದ್ದಾರೆ.
ಯಶ್‌ ಮುಂದಿನ ಸಿನಿಮಾ ಯಾವುದು ಅಂತಾ ಕಾಯುತ್ತಿದ್ದ ಅಭಿಮಾನಿಗಳ ಕಾತರಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬ ಅಭಿಮಾನಿಗಳ ಕುತೂಹಲಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರ ʼಟಾಕ್ಸಿಕ್‌ʼ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು.
ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ.
lokesh

Recent Posts

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

7 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

21 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

53 mins ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

3 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

4 hours ago