ಚಿತ್ರ ಮಂಜರಿ

ಹೊಂಬಾಳೆ ಫಿಲ್ಮ್ಸ್‌ ಬಗ್ಗೆ ರಾಕಿ ಬಾಯ್‌ ಮೆಚ್ಚುಗೆ

ಹೊಂಬಾಳೆ ಫಿಲ್ಮ್ಸ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್‌ ಗೆ ಸ್ವತಃ ಯಶ್‌ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ.
ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್‌ ಮತ್ತು ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ತಮ್ಮ ನಡುವಿನ ಬಾಂದವ್ಯಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.
ಯಶ್‌ ಅವರ ಟಾಕ್ಸಿಕ್‌ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಶುಭಕೋರಿದೆ. ಅಂತೆಯೇ ರಾಕಿಮಗ್‌ ಸ್ಟಾರ್‌ ಯಶ್‌ ಅವರೂ ಕೂಡ ಕಾಂತಾರ ಚಾಪ್ಟರ್‌ 1 ಹಾಗೂ ಸಲಾರ್‌ ಸಿನಿಮಾಗೆ ಅಭಿನಂದನೆ ತಿಳಿಸಿದ್ದು, ಎರಡೂ ಸಿನಿಮಾಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಸುಳ್ಳುಸುದ್ದಿಗಳಿಗೆ ತೆರೆ ಎಳೆದಿದ್ದಾರೆ.
ಯಶ್‌ ಮುಂದಿನ ಸಿನಿಮಾ ಯಾವುದು ಅಂತಾ ಕಾಯುತ್ತಿದ್ದ ಅಭಿಮಾನಿಗಳ ಕಾತರಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬ ಅಭಿಮಾನಿಗಳ ಕುತೂಹಲಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರ ʼಟಾಕ್ಸಿಕ್‌ʼ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು.
ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ.
lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago