ಚಿತ್ರ ಮಂಜರಿ

ಹೊಂಬಾಳೆ ಫಿಲ್ಮ್ಸ್‌ ಬಗ್ಗೆ ರಾಕಿ ಬಾಯ್‌ ಮೆಚ್ಚುಗೆ

ಹೊಂಬಾಳೆ ಫಿಲ್ಮ್ಸ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್‌ ಗೆ ಸ್ವತಃ ಯಶ್‌ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ.
ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್‌ ಮತ್ತು ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ತಮ್ಮ ನಡುವಿನ ಬಾಂದವ್ಯಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.
ಯಶ್‌ ಅವರ ಟಾಕ್ಸಿಕ್‌ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಶುಭಕೋರಿದೆ. ಅಂತೆಯೇ ರಾಕಿಮಗ್‌ ಸ್ಟಾರ್‌ ಯಶ್‌ ಅವರೂ ಕೂಡ ಕಾಂತಾರ ಚಾಪ್ಟರ್‌ 1 ಹಾಗೂ ಸಲಾರ್‌ ಸಿನಿಮಾಗೆ ಅಭಿನಂದನೆ ತಿಳಿಸಿದ್ದು, ಎರಡೂ ಸಿನಿಮಾಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಸುಳ್ಳುಸುದ್ದಿಗಳಿಗೆ ತೆರೆ ಎಳೆದಿದ್ದಾರೆ.
ಯಶ್‌ ಮುಂದಿನ ಸಿನಿಮಾ ಯಾವುದು ಅಂತಾ ಕಾಯುತ್ತಿದ್ದ ಅಭಿಮಾನಿಗಳ ಕಾತರಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬ ಅಭಿಮಾನಿಗಳ ಕುತೂಹಲಕ್ಕೆ ಡಿಸೆಂಬರ್‌ 8  ರಂದು ತೆರೆ ಬಿದ್ದಿತ್ತು.
ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರ ʼಟಾಕ್ಸಿಕ್‌ʼ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದರು.
ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ.
lokesh

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

6 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

6 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

6 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

6 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

6 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

6 hours ago