ಚಿತ್ರ ಮಂಜರಿ

ಆರ್.ಆರ್.ಆರ್ ಪಾರ್ಟ್ 2 ಸ್ಟೋರಿ ರೆಡಿ : ರಾಜಮೌಳಿ ನಿರ್ದೇಶನ ಅನುಮಾನ

ವಿಶ್ವವೇ ಬೆರಗಿನಿಂದ ನೋಡಿರುವ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಮುಂದುವರೆದ ಭಾಗ ಬರಲಿದೆ ಎಂದು ಸ್ವತಃ ರಾಜಮೌಳಿ ಅವರ ತಂದೆಯೇ ಮಾಹಿತಿಯನ್ನು ನೀಡಿದ್ದಾರೆ. ಆರ್.ಆರ್.ಆರ್ ಪಾರ್ಟ್ 2 ಸಿನಿಮಾದ ಕಥೆಯು ಸಿದ್ದವಾಗಿದ್ದು, ಯಾರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ನಿಗಧಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಜಮೌಳಿ ಕಾಂಬಿನೇಷನ್ ಕಾರಣದಿಂದಾಗಿ ಆರ್.ಆರ್.ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೀರವಾಣಿ ಸಂಗೀತ ಈ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟಿತ್ತು. ಅಲ್ಲದೇ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಈ ಸಿನಿಮಾ ಪಡೆದುಕೊಂಡಿದೆ. ಹೀಗಾಗಿ ಆರ್.ಆರ್.ಆರ್ ಸಿನಿಮಾದ ಮುಂದುವರೆದ ಭಾಗ ಬರುತ್ತದೆ ಎಂದಾಗ ಸಹಜವಾಗಿಯೇ ಕುತೂಹಲ ಮೂಡಿದೆ.

ಈ ಕುರಿತು ಮಾತನಾಡಿರುವ ವಿಜಯೇಂದ್ರ ಪ್ರಸಾದ್, ‘ಕಥೆ ಸಿದ್ದವಾಗಿದೆ. ಆದರೆ, ಈ ಸಿನಿಮಾವನ್ನು ರಾಜಮೌಳಿ ಮಾಡುತ್ತಾರಾ ಅಥವಾ ಹಾಲಿವುಡ್ ನ ನಿರ್ದೇಶಕರು ಮಾಡಲಿದ್ದಾರಾ ಎನ್ನುವುದು ಫೈನಲ್ ಆಗಿಲ್ಲ. ದೊಡ್ಡ ಮಟ್ಟದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡುವಂತಹ ತಯಾರಿ ನಡೆದಿದೆ’ ಎಂದಿದ್ದಾರೆ ರಾಜಮೌಳಿ ತಂದೆ.

ಈಗಾಗಲೇ ರಾಜಮೌಳಿ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಅವರಿಗಾಗಿ ರಾಜಮೌಳಿ ಸಿನಿಮಾ ಮಾಡಬೇಕಿದೆ. ಹೀಗಾಗಿ ಸದ್ಯ ಆರ್.ಆರ್.ಆರ್ ಪಾರ್ಟ್ 2 ಬರುವುದು ಅನುಮಾನ. ಒಂದು ವೇಳೆ ಹಾಲಿವುಡ್ ನಿರ್ದೇಶಕರಿಗೆ ಅವಕಾಶ ಸಿಕ್ಕರೆ ಅತೀ ಶೀಘ್ರದಲ್ಲೇ ಈ ಸಿನಿಮಾದ ಬಗ್ಗೆ ಮತ್ತಷ್ಟು ಅಪ್ ಡೇಟ್ ಸಿಗಬಹುದು.

lokesh

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

2 hours ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

2 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

3 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

3 hours ago