ವಿಶ್ವವೇ ಬೆರಗಿನಿಂದ ನೋಡಿರುವ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಮುಂದುವರೆದ ಭಾಗ ಬರಲಿದೆ ಎಂದು ಸ್ವತಃ ರಾಜಮೌಳಿ ಅವರ ತಂದೆಯೇ ಮಾಹಿತಿಯನ್ನು ನೀಡಿದ್ದಾರೆ. ಆರ್.ಆರ್.ಆರ್ ಪಾರ್ಟ್ 2 ಸಿನಿಮಾದ ಕಥೆಯು ಸಿದ್ದವಾಗಿದ್ದು, ಯಾರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ನಿಗಧಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.
ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಜಮೌಳಿ ಕಾಂಬಿನೇಷನ್ ಕಾರಣದಿಂದಾಗಿ ಆರ್.ಆರ್.ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೀರವಾಣಿ ಸಂಗೀತ ಈ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟಿತ್ತು. ಅಲ್ಲದೇ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಈ ಸಿನಿಮಾ ಪಡೆದುಕೊಂಡಿದೆ. ಹೀಗಾಗಿ ಆರ್.ಆರ್.ಆರ್ ಸಿನಿಮಾದ ಮುಂದುವರೆದ ಭಾಗ ಬರುತ್ತದೆ ಎಂದಾಗ ಸಹಜವಾಗಿಯೇ ಕುತೂಹಲ ಮೂಡಿದೆ.
ಈ ಕುರಿತು ಮಾತನಾಡಿರುವ ವಿಜಯೇಂದ್ರ ಪ್ರಸಾದ್, ‘ಕಥೆ ಸಿದ್ದವಾಗಿದೆ. ಆದರೆ, ಈ ಸಿನಿಮಾವನ್ನು ರಾಜಮೌಳಿ ಮಾಡುತ್ತಾರಾ ಅಥವಾ ಹಾಲಿವುಡ್ ನ ನಿರ್ದೇಶಕರು ಮಾಡಲಿದ್ದಾರಾ ಎನ್ನುವುದು ಫೈನಲ್ ಆಗಿಲ್ಲ. ದೊಡ್ಡ ಮಟ್ಟದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡುವಂತಹ ತಯಾರಿ ನಡೆದಿದೆ’ ಎಂದಿದ್ದಾರೆ ರಾಜಮೌಳಿ ತಂದೆ.
ಈಗಾಗಲೇ ರಾಜಮೌಳಿ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಅವರಿಗಾಗಿ ರಾಜಮೌಳಿ ಸಿನಿಮಾ ಮಾಡಬೇಕಿದೆ. ಹೀಗಾಗಿ ಸದ್ಯ ಆರ್.ಆರ್.ಆರ್ ಪಾರ್ಟ್ 2 ಬರುವುದು ಅನುಮಾನ. ಒಂದು ವೇಳೆ ಹಾಲಿವುಡ್ ನಿರ್ದೇಶಕರಿಗೆ ಅವಕಾಶ ಸಿಕ್ಕರೆ ಅತೀ ಶೀಘ್ರದಲ್ಲೇ ಈ ಸಿನಿಮಾದ ಬಗ್ಗೆ ಮತ್ತಷ್ಟು ಅಪ್ ಡೇಟ್ ಸಿಗಬಹುದು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…