ಚಿತ್ರ ಮಂಜರಿ

ಆರ್.ಆರ್.ಆರ್ ಪಾರ್ಟ್ 2 ಸ್ಟೋರಿ ರೆಡಿ : ರಾಜಮೌಳಿ ನಿರ್ದೇಶನ ಅನುಮಾನ

ವಿಶ್ವವೇ ಬೆರಗಿನಿಂದ ನೋಡಿರುವ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಮುಂದುವರೆದ ಭಾಗ ಬರಲಿದೆ ಎಂದು ಸ್ವತಃ ರಾಜಮೌಳಿ ಅವರ ತಂದೆಯೇ ಮಾಹಿತಿಯನ್ನು ನೀಡಿದ್ದಾರೆ. ಆರ್.ಆರ್.ಆರ್ ಪಾರ್ಟ್ 2 ಸಿನಿಮಾದ ಕಥೆಯು ಸಿದ್ದವಾಗಿದ್ದು, ಯಾರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ನಿಗಧಿಯಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಮತ್ತು ರಾಜಮೌಳಿ ಕಾಂಬಿನೇಷನ್ ಕಾರಣದಿಂದಾಗಿ ಆರ್.ಆರ್.ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೀರವಾಣಿ ಸಂಗೀತ ಈ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟಿತ್ತು. ಅಲ್ಲದೇ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಈ ಸಿನಿಮಾ ಪಡೆದುಕೊಂಡಿದೆ. ಹೀಗಾಗಿ ಆರ್.ಆರ್.ಆರ್ ಸಿನಿಮಾದ ಮುಂದುವರೆದ ಭಾಗ ಬರುತ್ತದೆ ಎಂದಾಗ ಸಹಜವಾಗಿಯೇ ಕುತೂಹಲ ಮೂಡಿದೆ.

ಈ ಕುರಿತು ಮಾತನಾಡಿರುವ ವಿಜಯೇಂದ್ರ ಪ್ರಸಾದ್, ‘ಕಥೆ ಸಿದ್ದವಾಗಿದೆ. ಆದರೆ, ಈ ಸಿನಿಮಾವನ್ನು ರಾಜಮೌಳಿ ಮಾಡುತ್ತಾರಾ ಅಥವಾ ಹಾಲಿವುಡ್ ನ ನಿರ್ದೇಶಕರು ಮಾಡಲಿದ್ದಾರಾ ಎನ್ನುವುದು ಫೈನಲ್ ಆಗಿಲ್ಲ. ದೊಡ್ಡ ಮಟ್ಟದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡುವಂತಹ ತಯಾರಿ ನಡೆದಿದೆ’ ಎಂದಿದ್ದಾರೆ ರಾಜಮೌಳಿ ತಂದೆ.

ಈಗಾಗಲೇ ರಾಜಮೌಳಿ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಅವರಿಗಾಗಿ ರಾಜಮೌಳಿ ಸಿನಿಮಾ ಮಾಡಬೇಕಿದೆ. ಹೀಗಾಗಿ ಸದ್ಯ ಆರ್.ಆರ್.ಆರ್ ಪಾರ್ಟ್ 2 ಬರುವುದು ಅನುಮಾನ. ಒಂದು ವೇಳೆ ಹಾಲಿವುಡ್ ನಿರ್ದೇಶಕರಿಗೆ ಅವಕಾಶ ಸಿಕ್ಕರೆ ಅತೀ ಶೀಘ್ರದಲ್ಲೇ ಈ ಸಿನಿಮಾದ ಬಗ್ಗೆ ಮತ್ತಷ್ಟು ಅಪ್ ಡೇಟ್ ಸಿಗಬಹುದು.

lokesh

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

38 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

2 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

4 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago