ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ ತಮಿಳಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬೇರೆ ಭಾಷೆಗಳಿಗೆ ಡಬ್ ಆಗಲಿದೆ.
ಸುರಾಗ್ ಚಲನಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ, ಉಪ್ಪಿ 2 ನಲ್ಲಿ ಉಪೇಂದ್ರ ಅವರ ಅಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗಮನಾರ್ಹವಾಗಿ, ಈ ಯುವ ಪ್ರತಿಭೆ ಕನ್ನಡದ ಜನಪ್ರಿಯ ಸಂಗೀತ ಸಂಯೋಜಕ, ನಟ ಮತ್ತು ನಿರ್ದೇಶಕ ಸಾಧು ಕೋಕಿಲಾ ಅವರ ಮಗ.
ಕಾಮಿಕಲ್ ಥ್ರಿಲ್ಲರ್ನ ಚಿತ್ರೀಕರಣ ಪ್ರಾರಂಭವಾಗಿದ್ದು, ಅವರು ಒಂದು ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಯೋಗಿ ಬಾಬು ಅವರ ಸಿನಿಮಾಗೆ ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಬಗ್ಗೆ ಮಾತನಾಡುವ ಸುರಾಗ್, ‘ಯೋಗಿ ಸರ್ ಮತ್ತು ನಾನು ಸುಮಾರು ಒಂದು ವರ್ಷದಿಂದ ಮಾತುಕತೆ ನಡೆಸುತ್ತಿದ್ದೆವು. ಇದೀಗ ಅಂತಿಮವಾಗಿ ಸಿನಿಮಾ ಸೆಟ್ಟೇರಿದೆ. ನಾನು 10 ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇನೆ ಮತ್ತು ಮುಂದಿನ ಶೆಡ್ಯೂಲ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ’ ಎನ್ನುತ್ತಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…