ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ ತಮಿಳಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬೇರೆ ಭಾಷೆಗಳಿಗೆ ಡಬ್ ಆಗಲಿದೆ.
ಸುರಾಗ್ ಚಲನಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ, ಉಪ್ಪಿ 2 ನಲ್ಲಿ ಉಪೇಂದ್ರ ಅವರ ಅಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗಮನಾರ್ಹವಾಗಿ, ಈ ಯುವ ಪ್ರತಿಭೆ ಕನ್ನಡದ ಜನಪ್ರಿಯ ಸಂಗೀತ ಸಂಯೋಜಕ, ನಟ ಮತ್ತು ನಿರ್ದೇಶಕ ಸಾಧು ಕೋಕಿಲಾ ಅವರ ಮಗ.
ಕಾಮಿಕಲ್ ಥ್ರಿಲ್ಲರ್ನ ಚಿತ್ರೀಕರಣ ಪ್ರಾರಂಭವಾಗಿದ್ದು, ಅವರು ಒಂದು ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಯೋಗಿ ಬಾಬು ಅವರ ಸಿನಿಮಾಗೆ ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಬಗ್ಗೆ ಮಾತನಾಡುವ ಸುರಾಗ್, ‘ಯೋಗಿ ಸರ್ ಮತ್ತು ನಾನು ಸುಮಾರು ಒಂದು ವರ್ಷದಿಂದ ಮಾತುಕತೆ ನಡೆಸುತ್ತಿದ್ದೆವು. ಇದೀಗ ಅಂತಿಮವಾಗಿ ಸಿನಿಮಾ ಸೆಟ್ಟೇರಿದೆ. ನಾನು 10 ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇನೆ ಮತ್ತು ಮುಂದಿನ ಶೆಡ್ಯೂಲ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ’ ಎನ್ನುತ್ತಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…