ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace Ground)ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಗಲಿದ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.
19 ವಿಭಾಗಗಳಿಗೆ ಪ್ರಶಸ್ತಿ
ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ.
2021ರಲ್ಲಿ ತರುಣ್ ಸುಧಿರ್ ನಿರ್ದೇಶನದ ‘ರಾಬರ್ಟ್’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ.
‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಅಭಿನಯಿಸಿದ್ದ ಯುವರತ್ನ ಚಿತ್ರದ ನೀನಾದೇನಾ ಹಾಡಿಗೆ ಗಾಯಕ ಅರ್ಮಾನ್ ಮಲೀಕ್ ಗೆ ಸೈಮಾ ಪ್ರಶಸ್ತಿ ದೊರಕಿದೆ. ಈ ಪ್ರಶಸ್ತಿಯನ್ನು ಅವರು ಅಪ್ಪು ಅವರಿಗೆ ಅರ್ಪಿಸಿದ್ದಾರೆ.
ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಿದೆ. ಖ್ಯಾತ ಕಲಾವಿದ ಕಮಲ್ ಹಾಸನ್, ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಪತ್ನಿ ರಾಧಿಕಾ ಜತೆ ಆಗಮಿಸಿದ್ದರು. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ , ಬಾಲಿವುಡ್ ಹೀರೋ ರಣವೀರ್, ಸಂಸದೆ ಸುಮಲತಾ, ತೆಲುಗು ನಟ ರಾಣಾ ದಗ್ಗುಬಾಟಿ, ತೆಲುಗಿನ ಆಲಿ ಕುಟುಂಬ, ಐಂದ್ರಿತಾ-ದಿಗಂತ್ ಜೋಡಿ, ಶುಭ್ರಾ. ಅಯ್ಯಪ್ಪ, ಸೋನು ಗೌಡ , ಲಾಸ್ಯ ನಾಗರಾಜ್ , ಕಾವ್ಯ ಶಾ, ಆಕುಲ್ ಬಾಲಾಜಿ , ನಿಧಿ ಸುಬ್ಬಯ್ಯ ಅರ್ಜುನ್ ಜನ್ಯ ಪೂರ್ಣಿಮ ರಾಮ್ ಕುಮಾರ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವು ನಟನಟಿಯರು ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…