ಚಿತ್ರ ಮಂಜರಿ

ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಂಭ್ರಮ…

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace Ground)ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಗಲಿದ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

19 ವಿಭಾಗಗಳಿಗೆ ಪ್ರಶಸ್ತಿ

ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ.

2021ರಲ್ಲಿ ತರುಣ್ ಸುಧಿರ್ ನಿರ್ದೇಶನದ ‘ರಾಬರ್ಟ್’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅಭಿನಯಿಸಿದ್ದ ಯುವರತ್ನ ಚಿತ್ರದ ನೀನಾದೇನಾ ಹಾಡಿಗೆ ಗಾಯಕ ಅರ್ಮಾನ್ ಮಲೀಕ್ ಗೆ ಸೈಮಾ ಪ್ರಶಸ್ತಿ ದೊರಕಿದೆ. ಈ ಪ್ರಶಸ್ತಿಯನ್ನು ಅವರು ಅಪ್ಪು ಅವರಿಗೆ ಅರ್ಪಿಸಿದ್ದಾರೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಿದೆ. ಖ್ಯಾತ ಕಲಾವಿದ ಕಮಲ್‌ ಹಾಸನ್, ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಪತ್ನಿ ರಾಧಿಕಾ ಜತೆ ಆಗಮಿಸಿದ್ದರು. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ , ಬಾಲಿವುಡ್‌ ಹೀರೋ ರಣವೀರ್‌, ಸಂಸದೆ ಸುಮಲತಾ, ತೆಲುಗು ನಟ ರಾಣಾ ದಗ್ಗುಬಾಟಿ, ತೆಲುಗಿನ ಆಲಿ ಕುಟುಂಬ, ಐಂದ್ರಿತಾ-ದಿಗಂತ್‌ ಜೋಡಿ, ಶುಭ್ರಾ. ಅಯ್ಯಪ್ಪ, ಸೋನು ಗೌಡ , ಲಾಸ್ಯ ನಾಗರಾಜ್ , ಕಾವ್ಯ ಶಾ, ಆಕುಲ್ ಬಾಲಾಜಿ , ನಿಧಿ ಸುಬ್ಬಯ್ಯ ಅರ್ಜುನ್ ಜನ್ಯ ಪೂರ್ಣಿಮ ರಾಮ್ ಕುಮಾರ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವು ನಟನಟಿಯರು ಭಾಗವಹಿಸಿದ್ದರು.

andolana

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago