ಚಿತ್ರ ಮಂಜರಿ

ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಂಭ್ರಮ…

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace Ground)ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಗಲಿದ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

19 ವಿಭಾಗಗಳಿಗೆ ಪ್ರಶಸ್ತಿ

ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ.

2021ರಲ್ಲಿ ತರುಣ್ ಸುಧಿರ್ ನಿರ್ದೇಶನದ ‘ರಾಬರ್ಟ್’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅಭಿನಯಿಸಿದ್ದ ಯುವರತ್ನ ಚಿತ್ರದ ನೀನಾದೇನಾ ಹಾಡಿಗೆ ಗಾಯಕ ಅರ್ಮಾನ್ ಮಲೀಕ್ ಗೆ ಸೈಮಾ ಪ್ರಶಸ್ತಿ ದೊರಕಿದೆ. ಈ ಪ್ರಶಸ್ತಿಯನ್ನು ಅವರು ಅಪ್ಪು ಅವರಿಗೆ ಅರ್ಪಿಸಿದ್ದಾರೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಿದೆ. ಖ್ಯಾತ ಕಲಾವಿದ ಕಮಲ್‌ ಹಾಸನ್, ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಪತ್ನಿ ರಾಧಿಕಾ ಜತೆ ಆಗಮಿಸಿದ್ದರು. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ , ಬಾಲಿವುಡ್‌ ಹೀರೋ ರಣವೀರ್‌, ಸಂಸದೆ ಸುಮಲತಾ, ತೆಲುಗು ನಟ ರಾಣಾ ದಗ್ಗುಬಾಟಿ, ತೆಲುಗಿನ ಆಲಿ ಕುಟುಂಬ, ಐಂದ್ರಿತಾ-ದಿಗಂತ್‌ ಜೋಡಿ, ಶುಭ್ರಾ. ಅಯ್ಯಪ್ಪ, ಸೋನು ಗೌಡ , ಲಾಸ್ಯ ನಾಗರಾಜ್ , ಕಾವ್ಯ ಶಾ, ಆಕುಲ್ ಬಾಲಾಜಿ , ನಿಧಿ ಸುಬ್ಬಯ್ಯ ಅರ್ಜುನ್ ಜನ್ಯ ಪೂರ್ಣಿಮ ರಾಮ್ ಕುಮಾರ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವು ನಟನಟಿಯರು ಭಾಗವಹಿಸಿದ್ದರು.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

15 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago