ಚಿತ್ರ ಮಂಜರಿ

ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಂಭ್ರಮ…

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace Ground)ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಗಲಿದ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

19 ವಿಭಾಗಗಳಿಗೆ ಪ್ರಶಸ್ತಿ

ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ.

2021ರಲ್ಲಿ ತರುಣ್ ಸುಧಿರ್ ನಿರ್ದೇಶನದ ‘ರಾಬರ್ಟ್’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅಭಿನಯಿಸಿದ್ದ ಯುವರತ್ನ ಚಿತ್ರದ ನೀನಾದೇನಾ ಹಾಡಿಗೆ ಗಾಯಕ ಅರ್ಮಾನ್ ಮಲೀಕ್ ಗೆ ಸೈಮಾ ಪ್ರಶಸ್ತಿ ದೊರಕಿದೆ. ಈ ಪ್ರಶಸ್ತಿಯನ್ನು ಅವರು ಅಪ್ಪು ಅವರಿಗೆ ಅರ್ಪಿಸಿದ್ದಾರೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಿದೆ. ಖ್ಯಾತ ಕಲಾವಿದ ಕಮಲ್‌ ಹಾಸನ್, ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಪತ್ನಿ ರಾಧಿಕಾ ಜತೆ ಆಗಮಿಸಿದ್ದರು. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ , ಬಾಲಿವುಡ್‌ ಹೀರೋ ರಣವೀರ್‌, ಸಂಸದೆ ಸುಮಲತಾ, ತೆಲುಗು ನಟ ರಾಣಾ ದಗ್ಗುಬಾಟಿ, ತೆಲುಗಿನ ಆಲಿ ಕುಟುಂಬ, ಐಂದ್ರಿತಾ-ದಿಗಂತ್‌ ಜೋಡಿ, ಶುಭ್ರಾ. ಅಯ್ಯಪ್ಪ, ಸೋನು ಗೌಡ , ಲಾಸ್ಯ ನಾಗರಾಜ್ , ಕಾವ್ಯ ಶಾ, ಆಕುಲ್ ಬಾಲಾಜಿ , ನಿಧಿ ಸುಬ್ಬಯ್ಯ ಅರ್ಜುನ್ ಜನ್ಯ ಪೂರ್ಣಿಮ ರಾಮ್ ಕುಮಾರ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವು ನಟನಟಿಯರು ಭಾಗವಹಿಸಿದ್ದರು.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago