ಚಿತ್ರ ಮಂಜರಿ

ಬೆಂಗಳೂರಿನಲ್ಲಿ ಸೈಮಾ ಅವಾರ್ಡ್‌ : ಅತಿಥಿಗಳಾಗಿ ಹಾಜರಾಗುವ ತಾರೆಯರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ​ಗ್ರೌಂಡ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಯಶ್ ಸೇರಿ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ನಿಧನ ಹೊಂದಿದ ಪುನೀತ್​ ರಾಜ್​ಕುಮಾರ್ ಅವರಿಗೆ ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಕೆ ಮಾಡಲಾಗುತ್ತಿದೆ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಮಾಗಳು ಸೈಮಾ ಅಡಿಯಲ್ಲಿ ಬರುತ್ತವೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ-ನಟಿ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ವಿನ್ನರ್ ಯಾರು ಎಂಬುದು ಇಂದು ಘೋಷಣೆ ಆಗಲಿದೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್​ಗಳ ಸಮಾಗಮ ಆಗಲಿದೆ. ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಅವರು ಮುಖ್ಯ ಅತಿಥಿ ಆಗಿ ಬರುತ್ತಿದ್ದಾರೆ. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ ಕೂಡ ಅತಿಥಿಗಳ ಸಾಲಿನಲ್ಲಿದ್ದಾರೆ. ವಿಜಯ್​ ದೇವರಕೊಂಡ, ತಮಿಳು ನಟ ಕಮಲ್ ಹಾಸನ್, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಮೊದಲ ದಿನ ಅತಿಥಿಯಾಗಿ ಬರಲಿದ್ದಾರೆ ಎಂದು ಬಾಲಿವುಡ್ ಬಾಕ್ಸ್​ ಆಫೀಸ್​ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

andolana

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

46 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

50 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

54 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

58 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago