2022ನೇ ಸಾಲಿನ ಪ್ರತಿಷ್ಠಿತ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಯಶ್ ಸೇರಿ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ನಿಧನ ಹೊಂದಿದ ಪುನೀತ್ ರಾಜ್ಕುಮಾರ್ ಅವರಿಗೆ ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಕೆ ಮಾಡಲಾಗುತ್ತಿದೆ.
‘ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಸಿನಿಮಾಗಳು ಸೈಮಾ ಅಡಿಯಲ್ಲಿ ಬರುತ್ತವೆ. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ-ನಟಿ ಸೇರಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಮುಗಿದಿದ್ದು, ವಿನ್ನರ್ ಯಾರು ಎಂಬುದು ಇಂದು ಘೋಷಣೆ ಆಗಲಿದೆ.
ಮೊದಲ ದಿನದ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ಗಳ ಸಮಾಗಮ ಆಗಲಿದೆ. ‘ಕೆಜಿಎಫ್ 2’ ಮೂಲಕ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ಯಶ್ ಅವರು ಮುಖ್ಯ ಅತಿಥಿ ಆಗಿ ಬರುತ್ತಿದ್ದಾರೆ. ‘ಪುಷ್ಪ’ ಹೀರೋ ಅಲ್ಲು ಅರ್ಜುನ್ ಕೂಡ ಅತಿಥಿಗಳ ಸಾಲಿನಲ್ಲಿದ್ದಾರೆ. ವಿಜಯ್ ದೇವರಕೊಂಡ, ತಮಿಳು ನಟ ಕಮಲ್ ಹಾಸನ್, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಮೊದಲ ದಿನ ಅತಿಥಿಯಾಗಿ ಬರಲಿದ್ದಾರೆ ಎಂದು ಬಾಲಿವುಡ್ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…