ಚಿತ್ರ ಮಂಜರಿ

ಬಹು ನಿರೀಕ್ಷಿತ ಸಲಾರ್‌ ಚಿತ್ರದ ಟ್ರೈಲರ್‌ ಬಿಡುಗಡೆ ದಿನಾಂಕ ಪ್ರಕಟ

ಕಳೆದ ವರ್ಷ ಬಾಕ್ಸ್‌ ಆಫೀಸ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್‌ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್‌ ಈ ವರ್ಷ ಮತ್ತೊಂದು ಬಿಗ್‌ ಚಿತ್ರ ಸಲಾರ್‌ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.

ಇದೇ ವರ್ಷ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಧೂಮಂ ಚಿತ್ರ ಬಿಡುಗಡೆಯಾಗಿತ್ತಾದರೂ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಗಳಿಸಿರಲಿಲ್ಲ. ಧೂಮಂ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಸಹ ಕಾಲಿಟ್ಟಿದ್ದ ಹೊಂಬಾಳೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರದ ಮೂಲಕ ಟಾಲಿವುಡ್‌ಗೂ ಸಹ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.

ಎಲ್ಲಾ ಎಂದುಕೊಂಡಂತೆ ನಡೆದಿದ್ದರೆ ಸಲಾರ್‌ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆಗೊಂಡು ಇಷ್ಟೊತ್ತಿಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರಬೇಕಿತ್ತು. ಆದರೆ ವಿಎಫ್‌ಎಕ್ಸ್‌ ಕೆಲಸಗಳು ವಿಳಂಬವಾದ ಕಾರಣ ಸಲಾರ್‌ ಬಿಡುಗಡೆ ತಡವಾಗಿದ್ದು ಚಿತ್ರ ಡಿಸೆಂಬರ್‌ 22ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನು ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು ಚಿತ್ರತಂಡ ಚಿತ್ರದ ಮೇಲಿನ ಕ್ರೇಜ್‌ ಹೆಚ್ಚಿಸುವ ಸಲುವಾಗಿ ಟ್ರೈಲರ್‌ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹಿಂದೆ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್‌ ನೀಲ್‌ ಟ್ರೈಲರ್‌ ಮೂಲಕ ಇನ್ಯಾವ ರೀತಿಯ ಮೋಡಿ ಮಾಡಲಿದ್ದಾರೆಯೋ ಕಾದು ನೋಡಬೇಕಿದೆ.

ಚಿತ್ರದ ಟ್ರೈಲರ್‌ ಡಿಸೆಂಬರ್‌ 1ರಂದು ರಾತ್ರಿ 7.19ಕ್ಕೆ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಸಾಮಾಜಿಕ ಜಾಲತಾಣಗಳಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಘೋಷಣೆ ಮಾಡಿದೆ. ಇನ್ನು ಚಿತ್ರದ ಕೇರಳ ವಿತರಣೆ ಹಕ್ಕನ್ನು ಪೃಥ್ವಿರಾಜ್‌ ಪ್ರೊಡಕ್ಷನ್ಸ್‌ ವಹಿಸಿಕೊಂಡಿದ್ದು, ತಮಿಳುನಾಡಿನ ವಿತರಣೆ ಹಕ್ಕು ರೆಡ್‌ ಜಿಯಂಟ್‌ ಸಂಸ್ಥೆಯ ಪಾಲಾಗಿದೆ ಹಾಗೂ ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ವಿತರಿಸಲಿದೆ. 

andolana

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago