ಚಿತ್ರ ಮಂಜರಿ

ಬಹು ನಿರೀಕ್ಷಿತ ಸಲಾರ್‌ ಚಿತ್ರದ ಟ್ರೈಲರ್‌ ಬಿಡುಗಡೆ ದಿನಾಂಕ ಪ್ರಕಟ

ಕಳೆದ ವರ್ಷ ಬಾಕ್ಸ್‌ ಆಫೀಸ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್‌ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್‌ ಈ ವರ್ಷ ಮತ್ತೊಂದು ಬಿಗ್‌ ಚಿತ್ರ ಸಲಾರ್‌ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.

ಇದೇ ವರ್ಷ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಧೂಮಂ ಚಿತ್ರ ಬಿಡುಗಡೆಯಾಗಿತ್ತಾದರೂ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಗಳಿಸಿರಲಿಲ್ಲ. ಧೂಮಂ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಸಹ ಕಾಲಿಟ್ಟಿದ್ದ ಹೊಂಬಾಳೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರದ ಮೂಲಕ ಟಾಲಿವುಡ್‌ಗೂ ಸಹ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.

ಎಲ್ಲಾ ಎಂದುಕೊಂಡಂತೆ ನಡೆದಿದ್ದರೆ ಸಲಾರ್‌ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆಗೊಂಡು ಇಷ್ಟೊತ್ತಿಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರಬೇಕಿತ್ತು. ಆದರೆ ವಿಎಫ್‌ಎಕ್ಸ್‌ ಕೆಲಸಗಳು ವಿಳಂಬವಾದ ಕಾರಣ ಸಲಾರ್‌ ಬಿಡುಗಡೆ ತಡವಾಗಿದ್ದು ಚಿತ್ರ ಡಿಸೆಂಬರ್‌ 22ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನು ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು ಚಿತ್ರತಂಡ ಚಿತ್ರದ ಮೇಲಿನ ಕ್ರೇಜ್‌ ಹೆಚ್ಚಿಸುವ ಸಲುವಾಗಿ ಟ್ರೈಲರ್‌ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹಿಂದೆ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್‌ ನೀಲ್‌ ಟ್ರೈಲರ್‌ ಮೂಲಕ ಇನ್ಯಾವ ರೀತಿಯ ಮೋಡಿ ಮಾಡಲಿದ್ದಾರೆಯೋ ಕಾದು ನೋಡಬೇಕಿದೆ.

ಚಿತ್ರದ ಟ್ರೈಲರ್‌ ಡಿಸೆಂಬರ್‌ 1ರಂದು ರಾತ್ರಿ 7.19ಕ್ಕೆ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಸಾಮಾಜಿಕ ಜಾಲತಾಣಗಳಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಘೋಷಣೆ ಮಾಡಿದೆ. ಇನ್ನು ಚಿತ್ರದ ಕೇರಳ ವಿತರಣೆ ಹಕ್ಕನ್ನು ಪೃಥ್ವಿರಾಜ್‌ ಪ್ರೊಡಕ್ಷನ್ಸ್‌ ವಹಿಸಿಕೊಂಡಿದ್ದು, ತಮಿಳುನಾಡಿನ ವಿತರಣೆ ಹಕ್ಕು ರೆಡ್‌ ಜಿಯಂಟ್‌ ಸಂಸ್ಥೆಯ ಪಾಲಾಗಿದೆ ಹಾಗೂ ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ವಿತರಿಸಲಿದೆ. 

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

5 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago