ಚಿತ್ರ ಮಂಜರಿ

ಬಹು ನಿರೀಕ್ಷಿತ ಸಲಾರ್‌ ಚಿತ್ರದ ಟ್ರೈಲರ್‌ ಬಿಡುಗಡೆ ದಿನಾಂಕ ಪ್ರಕಟ

ಕಳೆದ ವರ್ಷ ಬಾಕ್ಸ್‌ ಆಫೀಸ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್‌ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್‌ ಈ ವರ್ಷ ಮತ್ತೊಂದು ಬಿಗ್‌ ಚಿತ್ರ ಸಲಾರ್‌ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.

ಇದೇ ವರ್ಷ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಧೂಮಂ ಚಿತ್ರ ಬಿಡುಗಡೆಯಾಗಿತ್ತಾದರೂ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಗಳಿಸಿರಲಿಲ್ಲ. ಧೂಮಂ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಸಹ ಕಾಲಿಟ್ಟಿದ್ದ ಹೊಂಬಾಳೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರದ ಮೂಲಕ ಟಾಲಿವುಡ್‌ಗೂ ಸಹ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.

ಎಲ್ಲಾ ಎಂದುಕೊಂಡಂತೆ ನಡೆದಿದ್ದರೆ ಸಲಾರ್‌ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆಗೊಂಡು ಇಷ್ಟೊತ್ತಿಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರಬೇಕಿತ್ತು. ಆದರೆ ವಿಎಫ್‌ಎಕ್ಸ್‌ ಕೆಲಸಗಳು ವಿಳಂಬವಾದ ಕಾರಣ ಸಲಾರ್‌ ಬಿಡುಗಡೆ ತಡವಾಗಿದ್ದು ಚಿತ್ರ ಡಿಸೆಂಬರ್‌ 22ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನು ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು ಚಿತ್ರತಂಡ ಚಿತ್ರದ ಮೇಲಿನ ಕ್ರೇಜ್‌ ಹೆಚ್ಚಿಸುವ ಸಲುವಾಗಿ ಟ್ರೈಲರ್‌ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹಿಂದೆ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್‌ ನೀಲ್‌ ಟ್ರೈಲರ್‌ ಮೂಲಕ ಇನ್ಯಾವ ರೀತಿಯ ಮೋಡಿ ಮಾಡಲಿದ್ದಾರೆಯೋ ಕಾದು ನೋಡಬೇಕಿದೆ.

ಚಿತ್ರದ ಟ್ರೈಲರ್‌ ಡಿಸೆಂಬರ್‌ 1ರಂದು ರಾತ್ರಿ 7.19ಕ್ಕೆ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಸಾಮಾಜಿಕ ಜಾಲತಾಣಗಳಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಘೋಷಣೆ ಮಾಡಿದೆ. ಇನ್ನು ಚಿತ್ರದ ಕೇರಳ ವಿತರಣೆ ಹಕ್ಕನ್ನು ಪೃಥ್ವಿರಾಜ್‌ ಪ್ರೊಡಕ್ಷನ್ಸ್‌ ವಹಿಸಿಕೊಂಡಿದ್ದು, ತಮಿಳುನಾಡಿನ ವಿತರಣೆ ಹಕ್ಕು ರೆಡ್‌ ಜಿಯಂಟ್‌ ಸಂಸ್ಥೆಯ ಪಾಲಾಗಿದೆ ಹಾಗೂ ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ವಿತರಿಸಲಿದೆ. 

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago