ಚಿತ್ರ ಮಂಜರಿ

ಬಹು ನಿರೀಕ್ಷಿತ ಸಲಾರ್‌ ಚಿತ್ರದ ಟ್ರೈಲರ್‌ ಬಿಡುಗಡೆ ದಿನಾಂಕ ಪ್ರಕಟ

ಕಳೆದ ವರ್ಷ ಬಾಕ್ಸ್‌ ಆಫೀಸ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್‌ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್‌ ಈ ವರ್ಷ ಮತ್ತೊಂದು ಬಿಗ್‌ ಚಿತ್ರ ಸಲಾರ್‌ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಲು ಸಿದ್ಧವಾಗಿದೆ.

ಇದೇ ವರ್ಷ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಧೂಮಂ ಚಿತ್ರ ಬಿಡುಗಡೆಯಾಗಿತ್ತಾದರೂ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಗಳಿಸಿರಲಿಲ್ಲ. ಧೂಮಂ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಸಹ ಕಾಲಿಟ್ಟಿದ್ದ ಹೊಂಬಾಳೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರದ ಮೂಲಕ ಟಾಲಿವುಡ್‌ಗೂ ಸಹ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.

ಎಲ್ಲಾ ಎಂದುಕೊಂಡಂತೆ ನಡೆದಿದ್ದರೆ ಸಲಾರ್‌ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆಗೊಂಡು ಇಷ್ಟೊತ್ತಿಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರಬೇಕಿತ್ತು. ಆದರೆ ವಿಎಫ್‌ಎಕ್ಸ್‌ ಕೆಲಸಗಳು ವಿಳಂಬವಾದ ಕಾರಣ ಸಲಾರ್‌ ಬಿಡುಗಡೆ ತಡವಾಗಿದ್ದು ಚಿತ್ರ ಡಿಸೆಂಬರ್‌ 22ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನು ಚಿತ್ರದ ಬಿಡುಗಡೆ ದಿನಾಂಕ ಸಮೀಪಿಸುತ್ತಿದ್ದು ಚಿತ್ರತಂಡ ಚಿತ್ರದ ಮೇಲಿನ ಕ್ರೇಜ್‌ ಹೆಚ್ಚಿಸುವ ಸಲುವಾಗಿ ಟ್ರೈಲರ್‌ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಹಿಂದೆ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್‌ ನೀಲ್‌ ಟ್ರೈಲರ್‌ ಮೂಲಕ ಇನ್ಯಾವ ರೀತಿಯ ಮೋಡಿ ಮಾಡಲಿದ್ದಾರೆಯೋ ಕಾದು ನೋಡಬೇಕಿದೆ.

ಚಿತ್ರದ ಟ್ರೈಲರ್‌ ಡಿಸೆಂಬರ್‌ 1ರಂದು ರಾತ್ರಿ 7.19ಕ್ಕೆ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಸಾಮಾಜಿಕ ಜಾಲತಾಣಗಳಲ್ಲಿನ ತನ್ನ ಅಧಿಕೃತ ಖಾತೆಗಳಲ್ಲಿ ಘೋಷಣೆ ಮಾಡಿದೆ. ಇನ್ನು ಚಿತ್ರದ ಕೇರಳ ವಿತರಣೆ ಹಕ್ಕನ್ನು ಪೃಥ್ವಿರಾಜ್‌ ಪ್ರೊಡಕ್ಷನ್ಸ್‌ ವಹಿಸಿಕೊಂಡಿದ್ದು, ತಮಿಳುನಾಡಿನ ವಿತರಣೆ ಹಕ್ಕು ರೆಡ್‌ ಜಿಯಂಟ್‌ ಸಂಸ್ಥೆಯ ಪಾಲಾಗಿದೆ ಹಾಗೂ ಕರ್ನಾಟಕದಲ್ಲಿ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ವಿತರಿಸಲಿದೆ. 

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

35 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

36 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

2 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

2 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago