ಚಿತ್ರ ಮಂಜರಿ

ಹಾಲಿವುಡ್‌ ಅಂಗಳದಲ್ಲಿ ಸಲಾರ್ : ಯಾವಾಗ ರಿಲೀಸ್‌ ಆಗ್ತಿದೆ ಗೊತ್ತಾ ?

ಒಂದರ ಹಿಂದೊಂದು ಸಿನಿಮಾ ಫ್ಲಾಪ್ ಆಗುತ್ತಿದ್ದರೂ ಪ್ರಭಾಸ್ ಹವಾ ಮಾತ್ರ ಕಮ್ಮಿಯಾಗಿಲ್ಲ. ನನ್ನ ಹಾದಿ ನನ್ನದು ಎನ್ನುತ್ತಾ ನುಗ್ಗುತ್ತಿದ್ದಾರೆ. ಇದೀಗ ಸಲಾರ್ ಬಿಡುಗಡೆಗೆ ಸಿದ್ಧವಾಗಿದ್ದು, ದಿನಾಂಕ ಕೂಡ ನಿಗದಿಯಾಗಿದೆ. ಆದರೆ ಇಂಗ್ಲಿಷ್ ವರ್ಶನ್ ಸಲಾರ್ ಯಾವಾಗ ಬರಲಿದೆ? ಅದಕ್ಕೆ ಬೇರೊಂದು ದಿನ ಯಾಕೆ ಫಿಕ್ಸ್ ಮಾಡಿದರು? ಎನ್ನುವುದರ ಬಗೆಗಿನ ಮಾಹಿತಿ ಇಲ್ಲಿದೆ.

ಸಾಹೋ, ರಾಧೇಶ್ಯಾಮ್ ಹಾಗೂ ಆದಿಪುರುಷ್. ಮೂರೂ ಸಿನಿಮಾಗಳು ಫ್ಲಾಪ್‌ ಆಗಿದ್ದರಿಂದ ಪ್ರಭಾಸ್ ಕತೆ ಮುಗಿಯಿತೆಂದು ಕಾದಿದ್ದವರಿಗೆ ಸಲಾರ್ ಹಾಗೂ ಕಲ್ಕಿ ಕೊಟ್ಟ ಕಿಕ್ ಹೇಗಿತ್ತೆಂದು ಎಲ್ಲರಿಗೂ ಗೊತ್ತಿದೆ. ಈ ಎರಡು ಸಿನಿಮಾಗಳ ಟೀಸರ್ ಹಬ್ಬ ಮಾಡಿದ್ದು ಇಡೀ ವಿಶ್ವವನ್ನೇ ಸೆಳೆದಿದ್ದವು. ಪ್ರಭಾಸ್ ಫ್ಯಾನ್ಸ್ ಮತ್ತೆ ಮೈ ಕೊಡವಿ ಎದ್ದು ನಿಂತರು. ಪ್ರಭಾಸ್ ಕೂಡ ಹೊಸ ಹುರುಪಿನಿಂದ ಅಖಾಡಕ್ಕೆ ಇಳಿದರು. ಸದ್ಯಕ್ಕೆ ಸಲಾರ್, ಕಲ್ಕಿ ಹಾಗೂ ರಾಜಾ ಡಿಲಕ್ಸ್ ಬಾಕಿ ಕೆಲಸ ಮುಗಿಸುತ್ತಿದ್ದಾರೆ. ಈಗಲೇ ಮತ್ತೊಂದು ಹಬ್ಬಕ್ಕೆ ಅಭಿಮಾನಿಗಳು ಸಜ್ಜಾಗಿದ್ದಾರೆ.

ಮೂರು ಸಿನಿಮಾ ಸೋತದ್ದನ್ನು ಫ್ಯಾನ್ಸ್ ಮರೆತಿದ್ದಾರೆ. ಸಲಾರ್ ಇನ್ನೆರಡು ತಿಂಗಳಿಗೆ ಮೆರವಣಿಗೆ ಹೊರಡಲಿದೆ. ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. ಅದರ ಇಂಗ್ಲಿಷ್ ವರ್ಶನ್ ಕೂಡ ನಿರ್ಮಾಣವಾಗುತ್ತಿದೆ. ಅದು ಯಾವಾಗ ಬರಲಿದೆ ಎನ್ನುವ ಪ್ರಶ್ನೆಗೆ ಪಕ್ಕಾ ದಿನಾಂಕ ಸಿಗದಿದ್ದರೂ. ಅಕ್ಟೋಬರ್ ಎರಡನೇ ವಾರದಲ್ಲಿ ಹಾಲಿವುಡ್‌ನಲ್ಲಿ ಪ್ರಭಾಸ್ ಅಬ್ಬರಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

lokesh

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago