ಮುಂಬೈ: ಬಾಲಿವುಡ್ ‘ಬಾಯಿ ಜಾನ್’ ಸಲ್ಮಾನ್ ಖಾನ್ ನಟನೆಯ ‘ಕಿಸಿಕಾ ಬಾಯ್ ಕಿಸಿ ಕಿ ಜಾನ್’ ಚಿತ್ರದ ‘ಯೆಂಟಮ್ಮ’ ಹಾಡು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದ್ದು, ಸಲ್ಮಾನ್ ಖಾನ್ ಪಕ್ಕಾ ಸೌತ್ ಸ್ಟೈಲ್ನಲ್ಲಿ ಪಂಚೆಯುಟ್ಟು ನೃತ್ಯ ಮಾಡಿರುವುದನ್ನು ಕಂಡು ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಸಲ್ಮಾನ್ ಖಾನ್ ಜೊತೆಗೆ ‘ಆರ್ಆರ್ಆರ್’ ಖ್ಯಾತಿಯ ನಟ ರಾಮ್ ಚರಣ್ ಹಾಗೂ ವಿಕ್ಟರಿ ವೆಂಕಟೇಶ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಮೂವರು ಬಿಳಿ ಪಂಚೆ, ಹಳದಿ ಶರ್ಟ್ ಧರಿಸಿದ್ದು, ಪಕ್ಕಾ ಸೌತ್ ಸ್ಟೈಲ್ನಲ್ಲಿ ಮಿಂಚಿದ್ದಾರೆ.
ತೆಲುಗು ಮತ್ತು ಹಿಂದಿ ಸಾಹಿತ್ಯವನ್ನು ಬೆರೆಸಿ ‘ಯೆಂಟಮ್ಮ’ ಹಾಡನ್ನು ರಚಿಸಲಾಗಿದೆ. ಈ ಹಾಡಿನ ಸಂಯೋಜನೆಯನ್ನು ಪಾಯಲ್ ದೇವ್ ಮಾಡಿದ್ದಾರೆ. ಈ ಹಾಡಿಗೆ ಸಾಹಿತ್ಯವನ್ನು ಶಬ್ಬೀರ್ ಅಹಮ್ಮದ್ ರಚನೆ ಮಾಡಿದ್ದು, ವಿಶಾಲ್ ದದ್ಲಾನಿ ಮತ್ತು ಪಾಯಲ್ ದೇವ್ ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಈ ಹಾಡಿನಲ್ಲಿ ಪೂಜಾ ಹೆಗ್ಡೆ ಅವರು ಹಳ್ಳಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಎಪ್ರಿಲ್ 21ಕ್ಕೆ ಬಿಡುಗಡೆಗೊಳ್ಳಲಿದ್ದು, ಅಭಿಮಾನಿಗಳು ನೆಚ್ಚಿನ ನಟನ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಪಂಚೆಯಟ್ಟುಕೊಂಡು ಮೂವರು ನಟರು ಪೋಸ್ ನೀಡಿದ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ರಾಮ್ ಚರಣ್, ‘ಪರದೆಯ ಮೇಲೆ ಕಾಣಸಿಕೊಂಡ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಲವ್ ಯು ಬಾಯ್‘ ಎಂದು ಬರೆದುಕೊಂಡಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…