ನಟಿ ಸಮಂತಾ ರುತ್ ಪ್ರಭು ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಈ ವಿಚಾರವನ್ನು ಅವರು ಬಾಯ್ಬಿಟ್ಟು ಹೇಳುವುದಕ್ಕೂ ಮುನ್ನವೇ ಅನೇಕ ಮಾಧ್ಯಮಗಳಲ್ಲಿ ಜಗಜ್ಜಾಹೀರು ಆಗಿತ್ತು. ನಂತರ ತಮಗೆ Myositis ಎಂಬ ಕಾಯಿಲೆ ಇದೆ ಎಂದು ಸ್ವತಃ ಸಮಂತಾ ಒಪ್ಪಿಕೊಂಡರು. ಇದಕ್ಕೆ ಚಿಕಿತ್ಸೆ ಪಡೆಯಲು ಅವರು ಈ ಮೊದಲು ವಿದೇಶಕ್ಕೆ ತೆರಳಿದ್ದರು. ಬಳಿಕ ವಾಪಸ್ ಬಂದು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಕೈಗೆ ಡ್ರಿಪ್ಸ್ ಹಾಕಿಕೊಂಡೇ ಅವರು ‘ಯಶೋದಾ’ ಸಿನಿಮಾದ ಡಬ್ಬಿಂಗ್ ಮುಗಿಸಿದ್ದರು. ಭಾರತದಲ್ಲಿ ಅವರು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೂ ಕೂಡ ಅವರಿಗೆ ಪೂರ್ತಿ ವಾಸಿ ಆಗಿಲ್ಲ. ಹಾಗಾಗಿ ದಕ್ಷಿಣ ಕೊರಿಯಾಗೆ ತೆರಳಿ, ಅಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲು ಸಮಂತಾ ತೀರ್ಮಾನಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಆಯುರ್ವೇದ ಔಷದಿ ಪ್ರಯತ್ನಿಸಿದ್ದ ಸಮಂತಾ ಅವರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಆದ್ದರಿಂದ ಅವರು ದಕ್ಷಿಣ ಕೊರಿಯಾದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎಂಬ ಮಾಹಿತಿ ಹರಡಿದೆ. ಈ ಬಗ್ಗೆ ಸಮಂತಾ ಕಡೆಯಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ. ಎಲ್ಲವೂ ಅಂದಕೊಂಡಂತೆ ಆಗಿದ್ದರೆ ವಿಜಯ್ ದೇವರಕೊಂಡ ಜೊತೆಗೆ ‘ಖುಷಿ’ ಚಿತ್ರದ ಶೂಟಿಂಗ್ನಲ್ಲಿ ಸಮಂತಾ ಈಗ ಭಾಗಿ ಆಗಬೇಕಿತ್ತು. ಆದರೆ ಆ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…