ಚಿತ್ರ ಮಂಜರಿ

ಸಂಚಾರಿ ವಿಜಯ್‌ ನೆನಪಾರ್ಥ ಇಂದಿನಿಂದ 5 ದಿನಗಳ ಕಾಲ ನಾಟಕೋತ್ಸವ

ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್‌ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್‌ ಆಗಸ್ಟ್‌ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್‌ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ ಕೋಡಿಲ್ಲ?, ಕಮಲಮಣಿ ಹಾಗೂ ಕಾಮಿಡಿ ಕಲ್ಯಾಣ ನಾಟಕಗಳನ್ನು ಪ್ರದರ್ಶನಗೊಳಿಸಲಾಗುವುದು. ಪ್ರತಿ ದಿನ ಸಂಜೆ 7 ಗಂಟೆಗೆ ನಾಟಕ ಆರಂಭವಾಗಲಿದೆ.

ಇಂದು ಸಂಜೆ (ಆ.5) ರಂಗಭೂಮಿ ನಿರ್ದೇಶಕ ಸುರೇಶ್‌ ಆನಗಳ್ಳಿ, ಕತೆಗಾರ ವಸುಧೇಂದ್ರ ಹಾಗೂ ರಂಗ ಸಂಘಟಕ ಶ್ರೀನಿವಾಸ್‌ ಜಿ ಕಪ್ಪಣ್ಣ ನಾಟಕೋತ್ಸವ ಉದ್ಘಾಟಿಸಲಿದ್ದಾರೆ. 2009ರಲ್ಲಿ ಸಂಚಾರಿ ಥಿಯೇಟರ್‌ಗೆ ಪಾದಾರ್ಪಣೆ ಮಾಡಿದ ವಿಜಯ್‌ ಅವರು ಸಂಚಾರಿ ಥಿಯೇಟರ್‌ನ ಎಲ್ಲ ನಾಟಕಗಳ ಭಾಗವಾಗಿದ್ದರು. ರಂಗಭೂಮಿಯ ಕೆಲಸಗಳ ಬಗ್ಗೆ ಆಸಕ್ತಿ ಇಟ್ಟುಕೊಂಡಿದ್ದ ಅವರು ನಾಟಕಗಳಲ್ಲಿ ನಟಿಸುತ್ತಿದ್ದರು.

ಸಂಚಾರಿ ಥಿಯೇಟರ್‌ನಲ್ಲಿ ನಟನೆ, ನಿರ್ದೇಶನ ಸೇರಿದಂತೆ ರಂಗ ಚಟುವಟಿಕೆಗಳ ಭಾಗವಾಗಿದ್ದ ಸಂಚಾರಿ ವಿಜಯ್‌, 27 ವರ್ಷಗಳ ನಂತರ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟವರು. ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಅತ್ಯುನ್ನತ ಕೆಲಸಗಳನ್ನು ಮಾಡಿದವರು. ಇಂಥ ನಟನ ನೆನಪಿನಲ್ಲಿ ಸಂಚಾರಿ ಥಿಯೇಟರ್‌ ನಾಟಕೋತ್ಸವ ಆಯೋಜಿಸಿದೆ.

ಸಂಚಾರಿ ವಿಜಯ್‌ ಪುತ್ಥಳಿ ಅನಾವರಣ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಪುತ್ಥಳಿ ಅನಾವರಣ ಮಾಡಲಾಗಿದೆ. ಸಂಚಾರಿ ವಿಜಯ್‌ ಅವರ ಹುಟ್ಟೂರಾದ ಪಂಚನಹಳ್ಳಿಯ ಅವರ ತೋಟದಲ್ಲಿ ಪುತ್ಥಳಿಯನ್ನು ಕುಟುಂಬದ ಸದಸ್ಯರು ಅನಾವರಣ ಮಾಡಿದ್ದಾರೆ. ಕಲ್ಲಿನಿಂದ ಕೆತ್ತಲಾಗಿರುವ ವಿ ಅಕ್ಷರದ ಮೇಲೆ ಸಂಚಾರಿ ವಿಜಯ್‌ ಅವರ ಪುತ್ಥಳಿಯನ್ನು ರೂಪಿಸಲಾಗಿದೆ. ಪುಣ್ಯ ತಿಥಿಯ ಜತೆಗೆ ಹೀಗೆ ಪುತ್ಥಳಿಯನ್ನೂ ಸಹ ನಿರ್ಮಿಸುವ ಮೂಲಕ ಮರೆಯಲಾಗದ ನಟನನ್ನು ಅಜರಾಮರವಾಗಿಸಿದ್ದಾರೆ. ಸಂಚಾರಿ ವಿಜಯ್‌ ಅವರ ಈ ವಿಶೇಷ ಪುತ್ಥಳಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ.

andolana

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

7 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

11 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

11 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

12 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago