ಚಿತ್ರ ಮಂಜರಿ

ಸಂಚಾರಿ ವಿಜಯ್‌ ನೆನಪಾರ್ಥ ಇಂದಿನಿಂದ 5 ದಿನಗಳ ಕಾಲ ನಾಟಕೋತ್ಸವ

ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್‌ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್‌ ಆಗಸ್ಟ್‌ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್‌ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ ಕೋಡಿಲ್ಲ?, ಕಮಲಮಣಿ ಹಾಗೂ ಕಾಮಿಡಿ ಕಲ್ಯಾಣ ನಾಟಕಗಳನ್ನು ಪ್ರದರ್ಶನಗೊಳಿಸಲಾಗುವುದು. ಪ್ರತಿ ದಿನ ಸಂಜೆ 7 ಗಂಟೆಗೆ ನಾಟಕ ಆರಂಭವಾಗಲಿದೆ.

ಇಂದು ಸಂಜೆ (ಆ.5) ರಂಗಭೂಮಿ ನಿರ್ದೇಶಕ ಸುರೇಶ್‌ ಆನಗಳ್ಳಿ, ಕತೆಗಾರ ವಸುಧೇಂದ್ರ ಹಾಗೂ ರಂಗ ಸಂಘಟಕ ಶ್ರೀನಿವಾಸ್‌ ಜಿ ಕಪ್ಪಣ್ಣ ನಾಟಕೋತ್ಸವ ಉದ್ಘಾಟಿಸಲಿದ್ದಾರೆ. 2009ರಲ್ಲಿ ಸಂಚಾರಿ ಥಿಯೇಟರ್‌ಗೆ ಪಾದಾರ್ಪಣೆ ಮಾಡಿದ ವಿಜಯ್‌ ಅವರು ಸಂಚಾರಿ ಥಿಯೇಟರ್‌ನ ಎಲ್ಲ ನಾಟಕಗಳ ಭಾಗವಾಗಿದ್ದರು. ರಂಗಭೂಮಿಯ ಕೆಲಸಗಳ ಬಗ್ಗೆ ಆಸಕ್ತಿ ಇಟ್ಟುಕೊಂಡಿದ್ದ ಅವರು ನಾಟಕಗಳಲ್ಲಿ ನಟಿಸುತ್ತಿದ್ದರು.

ಸಂಚಾರಿ ಥಿಯೇಟರ್‌ನಲ್ಲಿ ನಟನೆ, ನಿರ್ದೇಶನ ಸೇರಿದಂತೆ ರಂಗ ಚಟುವಟಿಕೆಗಳ ಭಾಗವಾಗಿದ್ದ ಸಂಚಾರಿ ವಿಜಯ್‌, 27 ವರ್ಷಗಳ ನಂತರ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟವರು. ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಅತ್ಯುನ್ನತ ಕೆಲಸಗಳನ್ನು ಮಾಡಿದವರು. ಇಂಥ ನಟನ ನೆನಪಿನಲ್ಲಿ ಸಂಚಾರಿ ಥಿಯೇಟರ್‌ ನಾಟಕೋತ್ಸವ ಆಯೋಜಿಸಿದೆ.

ಸಂಚಾರಿ ವಿಜಯ್‌ ಪುತ್ಥಳಿ ಅನಾವರಣ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಪುತ್ಥಳಿ ಅನಾವರಣ ಮಾಡಲಾಗಿದೆ. ಸಂಚಾರಿ ವಿಜಯ್‌ ಅವರ ಹುಟ್ಟೂರಾದ ಪಂಚನಹಳ್ಳಿಯ ಅವರ ತೋಟದಲ್ಲಿ ಪುತ್ಥಳಿಯನ್ನು ಕುಟುಂಬದ ಸದಸ್ಯರು ಅನಾವರಣ ಮಾಡಿದ್ದಾರೆ. ಕಲ್ಲಿನಿಂದ ಕೆತ್ತಲಾಗಿರುವ ವಿ ಅಕ್ಷರದ ಮೇಲೆ ಸಂಚಾರಿ ವಿಜಯ್‌ ಅವರ ಪುತ್ಥಳಿಯನ್ನು ರೂಪಿಸಲಾಗಿದೆ. ಪುಣ್ಯ ತಿಥಿಯ ಜತೆಗೆ ಹೀಗೆ ಪುತ್ಥಳಿಯನ್ನೂ ಸಹ ನಿರ್ಮಿಸುವ ಮೂಲಕ ಮರೆಯಲಾಗದ ನಟನನ್ನು ಅಜರಾಮರವಾಗಿಸಿದ್ದಾರೆ. ಸಂಚಾರಿ ವಿಜಯ್‌ ಅವರ ಈ ವಿಶೇಷ ಪುತ್ಥಳಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago