ಚಿತ್ರ ಮಂಜರಿ

ಸಂಚಾರಿ ವಿಜಯ್‌ ನೆನಪಾರ್ಥ ಇಂದಿನಿಂದ 5 ದಿನಗಳ ಕಾಲ ನಾಟಕೋತ್ಸವ

ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್‌ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್‌ ಆಗಸ್ಟ್‌ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್‌ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ ಕೋಡಿಲ್ಲ?, ಕಮಲಮಣಿ ಹಾಗೂ ಕಾಮಿಡಿ ಕಲ್ಯಾಣ ನಾಟಕಗಳನ್ನು ಪ್ರದರ್ಶನಗೊಳಿಸಲಾಗುವುದು. ಪ್ರತಿ ದಿನ ಸಂಜೆ 7 ಗಂಟೆಗೆ ನಾಟಕ ಆರಂಭವಾಗಲಿದೆ.

ಇಂದು ಸಂಜೆ (ಆ.5) ರಂಗಭೂಮಿ ನಿರ್ದೇಶಕ ಸುರೇಶ್‌ ಆನಗಳ್ಳಿ, ಕತೆಗಾರ ವಸುಧೇಂದ್ರ ಹಾಗೂ ರಂಗ ಸಂಘಟಕ ಶ್ರೀನಿವಾಸ್‌ ಜಿ ಕಪ್ಪಣ್ಣ ನಾಟಕೋತ್ಸವ ಉದ್ಘಾಟಿಸಲಿದ್ದಾರೆ. 2009ರಲ್ಲಿ ಸಂಚಾರಿ ಥಿಯೇಟರ್‌ಗೆ ಪಾದಾರ್ಪಣೆ ಮಾಡಿದ ವಿಜಯ್‌ ಅವರು ಸಂಚಾರಿ ಥಿಯೇಟರ್‌ನ ಎಲ್ಲ ನಾಟಕಗಳ ಭಾಗವಾಗಿದ್ದರು. ರಂಗಭೂಮಿಯ ಕೆಲಸಗಳ ಬಗ್ಗೆ ಆಸಕ್ತಿ ಇಟ್ಟುಕೊಂಡಿದ್ದ ಅವರು ನಾಟಕಗಳಲ್ಲಿ ನಟಿಸುತ್ತಿದ್ದರು.

ಸಂಚಾರಿ ಥಿಯೇಟರ್‌ನಲ್ಲಿ ನಟನೆ, ನಿರ್ದೇಶನ ಸೇರಿದಂತೆ ರಂಗ ಚಟುವಟಿಕೆಗಳ ಭಾಗವಾಗಿದ್ದ ಸಂಚಾರಿ ವಿಜಯ್‌, 27 ವರ್ಷಗಳ ನಂತರ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟವರು. ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಅತ್ಯುನ್ನತ ಕೆಲಸಗಳನ್ನು ಮಾಡಿದವರು. ಇಂಥ ನಟನ ನೆನಪಿನಲ್ಲಿ ಸಂಚಾರಿ ಥಿಯೇಟರ್‌ ನಾಟಕೋತ್ಸವ ಆಯೋಜಿಸಿದೆ.

ಸಂಚಾರಿ ವಿಜಯ್‌ ಪುತ್ಥಳಿ ಅನಾವರಣ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಪುತ್ಥಳಿ ಅನಾವರಣ ಮಾಡಲಾಗಿದೆ. ಸಂಚಾರಿ ವಿಜಯ್‌ ಅವರ ಹುಟ್ಟೂರಾದ ಪಂಚನಹಳ್ಳಿಯ ಅವರ ತೋಟದಲ್ಲಿ ಪುತ್ಥಳಿಯನ್ನು ಕುಟುಂಬದ ಸದಸ್ಯರು ಅನಾವರಣ ಮಾಡಿದ್ದಾರೆ. ಕಲ್ಲಿನಿಂದ ಕೆತ್ತಲಾಗಿರುವ ವಿ ಅಕ್ಷರದ ಮೇಲೆ ಸಂಚಾರಿ ವಿಜಯ್‌ ಅವರ ಪುತ್ಥಳಿಯನ್ನು ರೂಪಿಸಲಾಗಿದೆ. ಪುಣ್ಯ ತಿಥಿಯ ಜತೆಗೆ ಹೀಗೆ ಪುತ್ಥಳಿಯನ್ನೂ ಸಹ ನಿರ್ಮಿಸುವ ಮೂಲಕ ಮರೆಯಲಾಗದ ನಟನನ್ನು ಅಜರಾಮರವಾಗಿಸಿದ್ದಾರೆ. ಸಂಚಾರಿ ವಿಜಯ್‌ ಅವರ ಈ ವಿಶೇಷ ಪುತ್ಥಳಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ.

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago