ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್ ಆಗಸ್ಟ್ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ ಕೋಡಿಲ್ಲ?, ಕಮಲಮಣಿ ಹಾಗೂ ಕಾಮಿಡಿ ಕಲ್ಯಾಣ ನಾಟಕಗಳನ್ನು ಪ್ರದರ್ಶನಗೊಳಿಸಲಾಗುವುದು. ಪ್ರತಿ ದಿನ ಸಂಜೆ 7 ಗಂಟೆಗೆ ನಾಟಕ ಆರಂಭವಾಗಲಿದೆ.
ಇಂದು ಸಂಜೆ (ಆ.5) ರಂಗಭೂಮಿ ನಿರ್ದೇಶಕ ಸುರೇಶ್ ಆನಗಳ್ಳಿ, ಕತೆಗಾರ ವಸುಧೇಂದ್ರ ಹಾಗೂ ರಂಗ ಸಂಘಟಕ ಶ್ರೀನಿವಾಸ್ ಜಿ ಕಪ್ಪಣ್ಣ ನಾಟಕೋತ್ಸವ ಉದ್ಘಾಟಿಸಲಿದ್ದಾರೆ. 2009ರಲ್ಲಿ ಸಂಚಾರಿ ಥಿಯೇಟರ್ಗೆ ಪಾದಾರ್ಪಣೆ ಮಾಡಿದ ವಿಜಯ್ ಅವರು ಸಂಚಾರಿ ಥಿಯೇಟರ್ನ ಎಲ್ಲ ನಾಟಕಗಳ ಭಾಗವಾಗಿದ್ದರು. ರಂಗಭೂಮಿಯ ಕೆಲಸಗಳ ಬಗ್ಗೆ ಆಸಕ್ತಿ ಇಟ್ಟುಕೊಂಡಿದ್ದ ಅವರು ನಾಟಕಗಳಲ್ಲಿ ನಟಿಸುತ್ತಿದ್ದರು.
ಸಂಚಾರಿ ಥಿಯೇಟರ್ನಲ್ಲಿ ನಟನೆ, ನಿರ್ದೇಶನ ಸೇರಿದಂತೆ ರಂಗ ಚಟುವಟಿಕೆಗಳ ಭಾಗವಾಗಿದ್ದ ಸಂಚಾರಿ ವಿಜಯ್, 27 ವರ್ಷಗಳ ನಂತರ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟವರು. ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಅತ್ಯುನ್ನತ ಕೆಲಸಗಳನ್ನು ಮಾಡಿದವರು. ಇಂಥ ನಟನ ನೆನಪಿನಲ್ಲಿ ಸಂಚಾರಿ ಥಿಯೇಟರ್ ನಾಟಕೋತ್ಸವ ಆಯೋಜಿಸಿದೆ.
ಸಂಚಾರಿ ವಿಜಯ್ ಪುತ್ಥಳಿ ಅನಾವರಣ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಪುತ್ಥಳಿ ಅನಾವರಣ ಮಾಡಲಾಗಿದೆ. ಸಂಚಾರಿ ವಿಜಯ್ ಅವರ ಹುಟ್ಟೂರಾದ ಪಂಚನಹಳ್ಳಿಯ ಅವರ ತೋಟದಲ್ಲಿ ಪುತ್ಥಳಿಯನ್ನು ಕುಟುಂಬದ ಸದಸ್ಯರು ಅನಾವರಣ ಮಾಡಿದ್ದಾರೆ. ಕಲ್ಲಿನಿಂದ ಕೆತ್ತಲಾಗಿರುವ ವಿ ಅಕ್ಷರದ ಮೇಲೆ ಸಂಚಾರಿ ವಿಜಯ್ ಅವರ ಪುತ್ಥಳಿಯನ್ನು ರೂಪಿಸಲಾಗಿದೆ. ಪುಣ್ಯ ತಿಥಿಯ ಜತೆಗೆ ಹೀಗೆ ಪುತ್ಥಳಿಯನ್ನೂ ಸಹ ನಿರ್ಮಿಸುವ ಮೂಲಕ ಮರೆಯಲಾಗದ ನಟನನ್ನು ಅಜರಾಮರವಾಗಿಸಿದ್ದಾರೆ. ಸಂಚಾರಿ ವಿಜಯ್ ಅವರ ಈ ವಿಶೇಷ ಪುತ್ಥಳಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಳ್ಳುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…