ಚಿತ್ರ ಮಂಜರಿ

ಸ್ಯಾಂಡಲ್‌ವುಡ್‌ ಸಿನಿಮಾ ಗೂಗಲ್‌ನ ಟಾಪ್‌ 5…

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್​ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್​ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್​ಗೆ​ ಹೊಸ ಚೈತನ್ಯ ನೀಡಿದ ಸಿನಿಮಾ ಇದು.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್​ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

8 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

8 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

9 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

9 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

9 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

9 hours ago