ಚಿತ್ರ ಮಂಜರಿ

ಸ್ಯಾಂಡಲ್‌ವುಡ್‌ ಸಿನಿಮಾ ಗೂಗಲ್‌ನ ಟಾಪ್‌ 5…

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್​ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್​ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್​ಗೆ​ ಹೊಸ ಚೈತನ್ಯ ನೀಡಿದ ಸಿನಿಮಾ ಇದು.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್​ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.

andolana

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

2 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

2 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

2 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

2 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

2 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

2 hours ago