ಬೆಂಗಳೂರು: ಕಿರುತೆರೆ ನಿರ್ಮಾಪಕರ ಸಂಘ, ಟೆಲಿವಿಷನ್ ಅಸೋಸಿಯೇಷನ್ ಹಾಗೂ ನಟ ಅನಿರುದ್ಧ ಅವರ ನಡುವೆ ಶನಿವಾರ(ಡಿ.10) ನಡೆದ ಸಂಧಾನ ಸಭೆ ಸಫಲವಾಗಿದೆ. ಈ ಮೂಲಕ ಕಿರುತೆರೆಯಿಂದ ಅನಿರುದ್ಧ ಅವರನ್ನು ತಾತ್ಕಾಲಿಕವಾಗಿ ಬಹಿಷ್ಕರಿಸಬೇಕು ಎನ್ನುವ ಆಗ್ರಹದ ವಿವಾದ ಸುಖಾಂತ್ಯಗೊಂಡಿದೆ.
ನಿರ್ದೇಶಕ ಪಿ.ಶೇಷಾದ್ರಿ ಅವರ ಸಮ್ಮುಖದಲ್ಲಿ ಈ ಸಭೆ ನಡೆದಿತ್ತು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅನಿರುದ್ಧ, ‘ಸಂಬಂಧಗಳಿಗೆ ಬೆಲೆ ಕೊಡುವವನು ನಾನು. ಸಂಬಂಧ ಉಳಿದುಕೊಳ್ಳಬೇಕು ಎನ್ನುವುದೇ ನನ್ನ ಉದ್ದೇಶವಾಗಿತ್ತು. ‘ಜೊತೆ ಜೊತೆಯಲಿ’ ದಾಖಲೆ ಸೃಷ್ಟಿ ಮಾಡಿದ ಧಾರಾವಾಹಿ. ಆ ಧಾರಾವಾಹಿಗೆ ಹೀಗಾಗಬಾರದಿತ್ತು. ಈ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಅವರ ಜೊತೆ ನಾನು ಮೂರು ವರ್ಷ ಎರಡು ತಿಂಗಳು ಕೆಲಸ ಮಾಡಿದ್ದೇನೆ. ಈ ಸಂಬಂಧ ಬಿರುಕು ಬಿಡಬಾರದಿತ್ತು. ಏನೋ ಕಾರಣದಿಂದ ಹಾಗೆ ಆಗಿಹೋಯಿತು. ಅದು ದುರಂತ. ನಾನು ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ. ಝೀ ವಾಹಿನಿಗೆ ಒಳ್ಳೆಯದಾಗಲಿ. ಆರೂರು ಜಗದೀಶ್ ಅವರಿಗೆ ಒಳ್ಳೆಯದಾಗಲಿ’ ಎಂದು ಜಗದೀಶ್ ಅವರನ್ನು ತಬ್ಬಿಕೊಂಡು ಭಾವುಕರಾದರು.
‘ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ, ಎಸ್. ನಾರಾಯಣ್ ಅವರ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಟಿಸುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಹೇಳಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…