ಬೆಂಗಳೂರು: ಕಿರುತೆರೆ ನಿರ್ಮಾಪಕರ ಸಂಘ, ಟೆಲಿವಿಷನ್ ಅಸೋಸಿಯೇಷನ್ ಹಾಗೂ ನಟ ಅನಿರುದ್ಧ ಅವರ ನಡುವೆ ಶನಿವಾರ(ಡಿ.10) ನಡೆದ ಸಂಧಾನ ಸಭೆ ಸಫಲವಾಗಿದೆ. ಈ ಮೂಲಕ ಕಿರುತೆರೆಯಿಂದ ಅನಿರುದ್ಧ ಅವರನ್ನು ತಾತ್ಕಾಲಿಕವಾಗಿ ಬಹಿಷ್ಕರಿಸಬೇಕು ಎನ್ನುವ ಆಗ್ರಹದ ವಿವಾದ ಸುಖಾಂತ್ಯಗೊಂಡಿದೆ.
ನಿರ್ದೇಶಕ ಪಿ.ಶೇಷಾದ್ರಿ ಅವರ ಸಮ್ಮುಖದಲ್ಲಿ ಈ ಸಭೆ ನಡೆದಿತ್ತು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅನಿರುದ್ಧ, ‘ಸಂಬಂಧಗಳಿಗೆ ಬೆಲೆ ಕೊಡುವವನು ನಾನು. ಸಂಬಂಧ ಉಳಿದುಕೊಳ್ಳಬೇಕು ಎನ್ನುವುದೇ ನನ್ನ ಉದ್ದೇಶವಾಗಿತ್ತು. ‘ಜೊತೆ ಜೊತೆಯಲಿ’ ದಾಖಲೆ ಸೃಷ್ಟಿ ಮಾಡಿದ ಧಾರಾವಾಹಿ. ಆ ಧಾರಾವಾಹಿಗೆ ಹೀಗಾಗಬಾರದಿತ್ತು. ಈ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಅವರ ಜೊತೆ ನಾನು ಮೂರು ವರ್ಷ ಎರಡು ತಿಂಗಳು ಕೆಲಸ ಮಾಡಿದ್ದೇನೆ. ಈ ಸಂಬಂಧ ಬಿರುಕು ಬಿಡಬಾರದಿತ್ತು. ಏನೋ ಕಾರಣದಿಂದ ಹಾಗೆ ಆಗಿಹೋಯಿತು. ಅದು ದುರಂತ. ನಾನು ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ. ಝೀ ವಾಹಿನಿಗೆ ಒಳ್ಳೆಯದಾಗಲಿ. ಆರೂರು ಜಗದೀಶ್ ಅವರಿಗೆ ಒಳ್ಳೆಯದಾಗಲಿ’ ಎಂದು ಜಗದೀಶ್ ಅವರನ್ನು ತಬ್ಬಿಕೊಂಡು ಭಾವುಕರಾದರು.
‘ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ, ಎಸ್. ನಾರಾಯಣ್ ಅವರ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಟಿಸುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಹೇಳಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…