ಚಿತ್ರ ಮಂಜರಿ

ಸಂಧಾನ ಸಭೆ ಸಫಲ: ನಟ ಅನಿರುದ್ಧ ನಿರಾಳ

ಬೆಂಗಳೂರು: ಕಿರುತೆರೆ ನಿರ್ಮಾಪಕರ ಸಂಘ, ಟೆಲಿವಿಷನ್‌ ಅಸೋಸಿಯೇಷನ್‌ ಹಾಗೂ ನಟ ಅನಿರುದ್ಧ ಅವರ ನಡುವೆ ಶನಿವಾರ(ಡಿ.10) ನಡೆದ ಸಂಧಾನ ಸಭೆ ಸಫಲವಾಗಿದೆ. ಈ ಮೂಲಕ ಕಿರುತೆರೆಯಿಂದ ಅನಿರುದ್ಧ ಅವರನ್ನು ತಾತ್ಕಾಲಿಕವಾಗಿ ಬಹಿಷ್ಕರಿಸಬೇಕು ಎನ್ನುವ ಆಗ್ರಹದ ವಿವಾದ ಸುಖಾಂತ್ಯಗೊಂಡಿದೆ. 

ನಿರ್ದೇಶಕ ಪಿ.ಶೇಷಾದ್ರಿ ಅವರ ಸಮ್ಮುಖದಲ್ಲಿ ಈ ಸಭೆ ನಡೆದಿತ್ತು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅನಿರುದ್ಧ, ‘ಸಂಬಂಧಗಳಿಗೆ ಬೆಲೆ ಕೊಡುವವನು ನಾನು. ಸಂಬಂಧ ಉಳಿದುಕೊಳ್ಳಬೇಕು ಎನ್ನುವುದೇ ನನ್ನ ಉದ್ದೇಶವಾಗಿತ್ತು. ‘ಜೊತೆ ಜೊತೆಯಲಿ’ ದಾಖಲೆ ಸೃಷ್ಟಿ ಮಾಡಿದ ಧಾರಾವಾಹಿ. ಆ ಧಾರಾವಾಹಿಗೆ ಹೀಗಾಗಬಾರದಿತ್ತು. ಈ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್‌ ಅವರ ಜೊತೆ ನಾನು ಮೂರು ವರ್ಷ ಎರಡು ತಿಂಗಳು ಕೆಲಸ ಮಾಡಿದ್ದೇನೆ. ಈ ಸಂಬಂಧ ಬಿರುಕು ಬಿಡಬಾರದಿತ್ತು. ಏನೋ ಕಾರಣದಿಂದ ಹಾಗೆ ಆಗಿಹೋಯಿತು. ಅದು ದುರಂತ. ನಾನು ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ. ಝೀ ವಾಹಿನಿಗೆ ಒಳ್ಳೆಯದಾಗಲಿ. ಆರೂರು ಜಗದೀಶ್‌ ಅವರಿಗೆ ಒಳ್ಳೆಯದಾಗಲಿ’ ಎಂದು ಜಗದೀಶ್‌ ಅವರನ್ನು ತಬ್ಬಿಕೊಂಡು ಭಾವುಕರಾದರು.

‘ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ, ಎಸ್‌. ನಾರಾಯಣ್‌ ಅವರ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಟಿಸುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಹೇಳಿದರು.

andolanait

Recent Posts

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

4 mins ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

8 mins ago

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

12 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

13 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

13 hours ago