ಬೆಂಗಳೂರು: ಕಿರುತೆರೆ ನಿರ್ಮಾಪಕರ ಸಂಘ, ಟೆಲಿವಿಷನ್ ಅಸೋಸಿಯೇಷನ್ ಹಾಗೂ ನಟ ಅನಿರುದ್ಧ ಅವರ ನಡುವೆ ಶನಿವಾರ(ಡಿ.10) ನಡೆದ ಸಂಧಾನ ಸಭೆ ಸಫಲವಾಗಿದೆ. ಈ ಮೂಲಕ ಕಿರುತೆರೆಯಿಂದ ಅನಿರುದ್ಧ ಅವರನ್ನು ತಾತ್ಕಾಲಿಕವಾಗಿ ಬಹಿಷ್ಕರಿಸಬೇಕು ಎನ್ನುವ ಆಗ್ರಹದ ವಿವಾದ ಸುಖಾಂತ್ಯಗೊಂಡಿದೆ.
ನಿರ್ದೇಶಕ ಪಿ.ಶೇಷಾದ್ರಿ ಅವರ ಸಮ್ಮುಖದಲ್ಲಿ ಈ ಸಭೆ ನಡೆದಿತ್ತು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅನಿರುದ್ಧ, ‘ಸಂಬಂಧಗಳಿಗೆ ಬೆಲೆ ಕೊಡುವವನು ನಾನು. ಸಂಬಂಧ ಉಳಿದುಕೊಳ್ಳಬೇಕು ಎನ್ನುವುದೇ ನನ್ನ ಉದ್ದೇಶವಾಗಿತ್ತು. ‘ಜೊತೆ ಜೊತೆಯಲಿ’ ದಾಖಲೆ ಸೃಷ್ಟಿ ಮಾಡಿದ ಧಾರಾವಾಹಿ. ಆ ಧಾರಾವಾಹಿಗೆ ಹೀಗಾಗಬಾರದಿತ್ತು. ಈ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಅವರ ಜೊತೆ ನಾನು ಮೂರು ವರ್ಷ ಎರಡು ತಿಂಗಳು ಕೆಲಸ ಮಾಡಿದ್ದೇನೆ. ಈ ಸಂಬಂಧ ಬಿರುಕು ಬಿಡಬಾರದಿತ್ತು. ಏನೋ ಕಾರಣದಿಂದ ಹಾಗೆ ಆಗಿಹೋಯಿತು. ಅದು ದುರಂತ. ನಾನು ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ. ಝೀ ವಾಹಿನಿಗೆ ಒಳ್ಳೆಯದಾಗಲಿ. ಆರೂರು ಜಗದೀಶ್ ಅವರಿಗೆ ಒಳ್ಳೆಯದಾಗಲಿ’ ಎಂದು ಜಗದೀಶ್ ಅವರನ್ನು ತಬ್ಬಿಕೊಂಡು ಭಾವುಕರಾದರು.
‘ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ, ಎಸ್. ನಾರಾಯಣ್ ಅವರ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಟಿಸುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಹೇಳಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…