ಬೆಂಗಳೂರು: ಕಿರುತೆರೆ ನಿರ್ಮಾಪಕರ ಸಂಘ, ಟೆಲಿವಿಷನ್ ಅಸೋಸಿಯೇಷನ್ ಹಾಗೂ ನಟ ಅನಿರುದ್ಧ ಅವರ ನಡುವೆ ಶನಿವಾರ(ಡಿ.10) ನಡೆದ ಸಂಧಾನ ಸಭೆ ಸಫಲವಾಗಿದೆ. ಈ ಮೂಲಕ ಕಿರುತೆರೆಯಿಂದ ಅನಿರುದ್ಧ ಅವರನ್ನು ತಾತ್ಕಾಲಿಕವಾಗಿ ಬಹಿಷ್ಕರಿಸಬೇಕು ಎನ್ನುವ ಆಗ್ರಹದ ವಿವಾದ ಸುಖಾಂತ್ಯಗೊಂಡಿದೆ.
ನಿರ್ದೇಶಕ ಪಿ.ಶೇಷಾದ್ರಿ ಅವರ ಸಮ್ಮುಖದಲ್ಲಿ ಈ ಸಭೆ ನಡೆದಿತ್ತು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅನಿರುದ್ಧ, ‘ಸಂಬಂಧಗಳಿಗೆ ಬೆಲೆ ಕೊಡುವವನು ನಾನು. ಸಂಬಂಧ ಉಳಿದುಕೊಳ್ಳಬೇಕು ಎನ್ನುವುದೇ ನನ್ನ ಉದ್ದೇಶವಾಗಿತ್ತು. ‘ಜೊತೆ ಜೊತೆಯಲಿ’ ದಾಖಲೆ ಸೃಷ್ಟಿ ಮಾಡಿದ ಧಾರಾವಾಹಿ. ಆ ಧಾರಾವಾಹಿಗೆ ಹೀಗಾಗಬಾರದಿತ್ತು. ಈ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಅವರ ಜೊತೆ ನಾನು ಮೂರು ವರ್ಷ ಎರಡು ತಿಂಗಳು ಕೆಲಸ ಮಾಡಿದ್ದೇನೆ. ಈ ಸಂಬಂಧ ಬಿರುಕು ಬಿಡಬಾರದಿತ್ತು. ಏನೋ ಕಾರಣದಿಂದ ಹಾಗೆ ಆಗಿಹೋಯಿತು. ಅದು ದುರಂತ. ನಾನು ಅಭಿಮಾನಿಗಳ ಬಳಿ ಕ್ಷಮೆ ಕೋರುತ್ತೇನೆ. ಝೀ ವಾಹಿನಿಗೆ ಒಳ್ಳೆಯದಾಗಲಿ. ಆರೂರು ಜಗದೀಶ್ ಅವರಿಗೆ ಒಳ್ಳೆಯದಾಗಲಿ’ ಎಂದು ಜಗದೀಶ್ ಅವರನ್ನು ತಬ್ಬಿಕೊಂಡು ಭಾವುಕರಾದರು.
‘ಉದಯ ವಾಹಿನಿಯಲ್ಲಿ ಪ್ರಸಾರವಾಗಲಿರುವ, ಎಸ್. ನಾರಾಯಣ್ ಅವರ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಟಿಸುತ್ತಿದ್ದೇನೆ’ ಎಂದು ಇದೇ ವೇಳೆ ಅವರು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…