ಸದ್ಯ ಹತ್ತನೇ ಆವೃತ್ತಿಯ ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ಸಾಲು ಸಾಲು ಜಗಳ, ಕಿತ್ತಾಟಗಳಿಂದಲೇ ಹೆಚ್ಚು ಸುದ್ದಿಗೀಡಾಗಿದೆ. ಕಳೆದ ಬಾರಿಯ ಸೀಸನ್ಗಳಲ್ಲಿ ಇಲ್ಲದೇ ಇದ್ದಷ್ಟು ಗುಂಪುಗಾರಿಕೆ, ಕುತಂತ್ರ ಈ ಬಾರಿ ಇರುವುದೇ ಬಿಗ್ ಬಾಸ್ ಇತಿಹಾಸದಲ್ಲಿಯೇ ಈ ಆವೃತ್ತಿ ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ಕಾರಣವಾಗಿದೆ.
ಇನ್ನು ಈ ಬಾರಿ ವಿನಯ್ ಹಾಗೂ ಕಾರ್ತಿಕ್ ಈ ಇಬ್ಬರದ್ದೂ ಪ್ರತ್ಯೇಕ ಗುಂಪುಗಳಿದ್ದು, ವಿನಯ್ ಗುಂಪಿನಲ್ಲಿ ನಮ್ರತಾ ಗೌಡ ಹಾಗೂ ಸ್ನೇಹಿತ್ ಸೇರಿಕೊಂಡರೆ, ಕಾರ್ತಿಕ್ ಗುಂಪಿನಲ್ಲಿ ಸಂಗೀತಾ ಶೃಂಗೇರಿ ಹಾಗೂ ಡ್ರೋನ್ ಪ್ರತಾಪ್ ಗುರುತಿಸಿಕೊಂಡಿದ್ದರು. ಅಲ್ಲದೇ ಕಾರ್ತಿಕ್ ಹಾಗೂ ಸಂಗೀತಾ ಶೃಂಗೇರಿ ಇಬ್ಬರನ್ನು ಒಳ್ಳೆಯ ಜೋಡಿ ಎಂದೂ ಸಹ ವೀಕ್ಷಕರು ಹೊಗಳುತ್ತಿದ್ದರು.
ಆದರೆ ಇತ್ತೀಚಿನ ಎಪಿಸೋಡ್ ಒಂದರಲ್ಲಿ ಸಂಗೀತ ಶೃಂಗೇರಿ ಕಾರ್ತಿಕ್ ಗುಂಪನ್ನು ಬಿಟ್ಟು ವಿನಯ್ ಗುಂಪನ್ನು ಸೇರಿಕೊಂಡಿದ್ದಾರೆ. ಅಲ್ಲದೇ ಕಾರ್ತಿಕ್ ತಲೆ ಬೋಳಿಸಿಕೊಳ್ಳಲು ಸಹ ಕಾರಣರಾಗಿದ್ದಾರೆ. ಸಂಗೀತ ಶೃಂಗೇರಿ ಅವರ ಈ ನಡೆ ವೀಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಪರಿಣಾಮ ಸಾಮಾಜಿಕ ಜಾಲತಾಣದ ತುಂಬಾ ಸಂಗೀತಾ ಶೃಂಗೇರಿ ವಿರುದ್ಧ ಭಾರೀ ಪ್ರಮಾಣದ ನೆಗೆಟಿವ್ ಕಾಮೆಂಟ್ ಹರಿದಾಡುತ್ತಿವೆ.
ಅಲ್ಲದೇ ಸಂಗೀತಾ ಶೃಂಗೇರಿ ಇನ್ಸ್ಟಾಗ್ರಾಮ್ ಖಾತೆಯನ್ನು ಬರೋಬ್ಬರಿ 10 ಸಾವಿರ ಜನ ಅನ್ ಫಾಲೋ ಮಾಡಿದ್ದಾರೆ. 449000 ಫಾಲೋವರ್ಸ್ ಹೊಂದಿದ್ದ ಸಂಗೀತ ಶೃಂಗೇರಿ ಈಗ 439000 ಫಾಲೋವರ್ಸ್ ಹೊಂದಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…