ಸದ್ಯ ಹತ್ತನೇ ಆವೃತ್ತಿಯ ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ಸಾಲು ಸಾಲು ಜಗಳ, ಕಿತ್ತಾಟಗಳಿಂದಲೇ ಹೆಚ್ಚು ಸುದ್ದಿಗೀಡಾಗಿದೆ. ಕಳೆದ ಬಾರಿಯ ಸೀಸನ್ಗಳಲ್ಲಿ ಇಲ್ಲದೇ ಇದ್ದಷ್ಟು ಗುಂಪುಗಾರಿಕೆ, ಕುತಂತ್ರ ಈ ಬಾರಿ ಇರುವುದೇ ಬಿಗ್ ಬಾಸ್ ಇತಿಹಾಸದಲ್ಲಿಯೇ ಈ ಆವೃತ್ತಿ ದೊಡ್ಡ ಮಟ್ಟದಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ಕಾರಣವಾಗಿದೆ.
ಇನ್ನು ಈ ಬಾರಿ ವಿನಯ್ ಹಾಗೂ ಕಾರ್ತಿಕ್ ಈ ಇಬ್ಬರದ್ದೂ ಪ್ರತ್ಯೇಕ ಗುಂಪುಗಳಿದ್ದು, ವಿನಯ್ ಗುಂಪಿನಲ್ಲಿ ನಮ್ರತಾ ಗೌಡ ಹಾಗೂ ಸ್ನೇಹಿತ್ ಸೇರಿಕೊಂಡರೆ, ಕಾರ್ತಿಕ್ ಗುಂಪಿನಲ್ಲಿ ಸಂಗೀತಾ ಶೃಂಗೇರಿ ಹಾಗೂ ಡ್ರೋನ್ ಪ್ರತಾಪ್ ಗುರುತಿಸಿಕೊಂಡಿದ್ದರು. ಅಲ್ಲದೇ ಕಾರ್ತಿಕ್ ಹಾಗೂ ಸಂಗೀತಾ ಶೃಂಗೇರಿ ಇಬ್ಬರನ್ನು ಒಳ್ಳೆಯ ಜೋಡಿ ಎಂದೂ ಸಹ ವೀಕ್ಷಕರು ಹೊಗಳುತ್ತಿದ್ದರು.
ಆದರೆ ಇತ್ತೀಚಿನ ಎಪಿಸೋಡ್ ಒಂದರಲ್ಲಿ ಸಂಗೀತ ಶೃಂಗೇರಿ ಕಾರ್ತಿಕ್ ಗುಂಪನ್ನು ಬಿಟ್ಟು ವಿನಯ್ ಗುಂಪನ್ನು ಸೇರಿಕೊಂಡಿದ್ದಾರೆ. ಅಲ್ಲದೇ ಕಾರ್ತಿಕ್ ತಲೆ ಬೋಳಿಸಿಕೊಳ್ಳಲು ಸಹ ಕಾರಣರಾಗಿದ್ದಾರೆ. ಸಂಗೀತ ಶೃಂಗೇರಿ ಅವರ ಈ ನಡೆ ವೀಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಪರಿಣಾಮ ಸಾಮಾಜಿಕ ಜಾಲತಾಣದ ತುಂಬಾ ಸಂಗೀತಾ ಶೃಂಗೇರಿ ವಿರುದ್ಧ ಭಾರೀ ಪ್ರಮಾಣದ ನೆಗೆಟಿವ್ ಕಾಮೆಂಟ್ ಹರಿದಾಡುತ್ತಿವೆ.
ಅಲ್ಲದೇ ಸಂಗೀತಾ ಶೃಂಗೇರಿ ಇನ್ಸ್ಟಾಗ್ರಾಮ್ ಖಾತೆಯನ್ನು ಬರೋಬ್ಬರಿ 10 ಸಾವಿರ ಜನ ಅನ್ ಫಾಲೋ ಮಾಡಿದ್ದಾರೆ. 449000 ಫಾಲೋವರ್ಸ್ ಹೊಂದಿದ್ದ ಸಂಗೀತ ಶೃಂಗೇರಿ ಈಗ 439000 ಫಾಲೋವರ್ಸ್ ಹೊಂದಿದ್ದಾರೆ.
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…